ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ಪಲ್ಟಿ: ಓರ್ವ ಸಾವು, ಗ್ರಾಮ ಪಂಚಾಯಿತಿ ಅಭ್ಯರ್ಥಿ ಪುತ್ರನಿಗೆ ಗಂಭೀರ ಗಾಯ

Last Updated 30 ಡಿಸೆಂಬರ್ 2020, 13:30 IST
ಅಕ್ಷರ ಗಾತ್ರ

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ತುಂಗಾ ಎಡದಂಡೆ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕನವಳ್ಳಿ ಶಿಬಾರ ಗ್ರಾಮದ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.

ಸಿದ್ದನಗೌಡ ಬಿಷ್ಟನಗೌಡರ (45) ಮೃತಪಟ್ಟವರು. ನೆಗಳೂರು ಗ್ರಾಮದ ಪ್ರಕಾಶ ಬನ್ನಿಮಟ್ಟಿ (40) ಇವರು ಗಂಭೀರ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕಾಶ ಬನ್ನಿಮಟ್ಟಿ ಅವರು ನೆಗಳೂರು ಗ್ರಾಮ ಪಂಚಾಯಿತಿ ಅಭ್ಯರ್ಥಿ ಚನ್ನಬಸಪ್ಪ ಬನ್ನಿಮಟ್ಟಿ ಅವರ ಪುತ್ರ. ಬೆಳಿಗ್ಗೆ ಕನವಳ್ಳಿ ಗ್ರಾಮದ ಪರಮೇಶ್ವರ ದೇವಸ್ಥಾನದಲ್ಲಿ ತಂದೆಯ ಗೆಲುವಿಗಾಗಿ ಪೂಜೆ ಸಲ್ಲಿಸಿ, ಮರಳಿ ಹಾವೇರಿ ಮತ ಎಣಿಕೆ ಕೇಂದ್ರದತ್ತ ಬರುವಾಗ ದುರ್ಘಟನೆ ಸಂಭವಿಸಿದೆ. ಗುತ್ತಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚುನಾವಣೆಯಲ್ಲಿ ಚನ್ನಬಸಪ್ಪ ಬನ್ನಿಮಟ್ಟಿ ಅವರು ಸೋಲು ಅನುಭವಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT