ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈವೆಯಲ್ಲಿ ಹೊತ್ತಿ ಉರಿದ ಎರಡು ತಿಂಗಳ ಹಿಂದೆಯಷ್ಟೇ ಖರೀದಿಸಿದ್ದ ಹೊಸ ಕಾರ್!

Last Updated 14 ಜುಲೈ 2022, 14:20 IST
ಅಕ್ಷರ ಗಾತ್ರ

ಸವಣೂರು (ಹಾವೇರಿ): ಗದಗದಿಂದ ಹಾವೇರಿ ಕಡೆಗೆ ಹೊರಟಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಹೊತ್ತಿ ಉರಿದ ಘಟನೆ ಗುರುವಾರ ಸಂಜೆ ತಾಲ್ಲೂಕಿನ ಕುಣಿಮೆಳ್ಳಿಹಳ್ಳಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ– 4ರಲ್ಲಿ ನಡೆದಿದೆ.

ಗದಗ ನಗರದ ನಿವಾಸಿ ವಿಕ್ರಂ ಬಾಪನಾ ಹಿರಾಚಂದ್‌ ಅವರಿಗೆ ಸೇರಿದ ಕಾರು ಎಂದು ತಿಳಿದು ಬಂದಿದೆ. ಇವರ ಜತೆಗೆ ಪ್ರಯಾಣ ಮಾಡುತ್ತಿದ್ದ ಸ್ನೇಹಿತರಾದ ವಿವೇಕಾನಂದ ಬಡಾವಣೆ ನಿವಾಸಿ ಸಂತೋಷ ಶಿವಪ್ಪ ಕುರಿ ಮತ್ತು ಅಸ್ಲಾಂ ಅಬ್ದುಲ್‌ ರೆಹಮಾನ್‌ಸಾಬ್‌ ಮಾಲದಾರ ಈ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಏಕಾಏಕಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಎಚ್ಚೆತ್ತುಕೊಂಡು ತಕ್ಷಣ ರಸ್ತೆ ಬದಿಗೆ ಕಾರು ನಿಲ್ಲಿಸಿ, ಮೂವರು ಪ್ರಯಾಣಿಕರು ಕೆಳಗಿಳಿಯುತ್ತಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿಯಲು ಪ್ರಾರಂಭಿಸಿದೆ. ಕಾರು ಖರೀದಿಸಿ 2 ತಿಂಗಳಾಗಿತ್ತು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬರುವ ವೇಳೆಗೆ ಕಾರು ಸುಟ್ಟು ಕರಕಲಾಗಿತ್ತು. ಈ ಘಟನೆ ಸವಣೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಿಎಸ್‌ಐಗಳಾದ ಮೇಘರಾಜ ದೊಡ್ಡಮನಿ ಮತ್ತು ಎಸ್‌.ಡಿ.ಸಾಗರ್‌ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT