ನೀರಾವರಿ ಜೋಳ, ಈರುಳ್ಳಿ ಹಾಗೂ ಮಳೆಯಾಶ್ರಿತ ಜೋಳ, ಕುಸಬೆ, ರ್ಸೂಕಾಂತಿ, ಟೊಮೆಟೊ ಬೆಳೆಗಳ ವಿಮೆ ಕಂತು ತುಂಬಲು ನ.30 ಕೊನೆಯ ದಿನಾಂಕವಾಗಿದೆ. ಮಳೆಯಾಶ್ರಿತ ಕಡಲೆ, ಗೋಧಿ ಹಾಗೂ ನೀರಾವರಿ ಸೂರ್ಯಕಾಂತಿ, ಕಡಲೆ ಬೆಳೆಗೆ ವಿಮೆ ಕಂತು ತುಂಬಲು ಡಿ.16 ಕೊನೆಯ ದಿನಾಂಕವಾಗಿದೆ. ಮಳೆಯಾಶ್ರಿತ ಉದ್ದು, ಹೆಸರು, ಹುರುಳಿ ಹಾಗೂ ನೀರಾವರಿ ಮುಸುಕಿನ ಜೋಳದ ಬೆಳೆ ವಿಮೆ ಕಂತು ತುಂಬಲು ಡಿ.31 ಕೊನೆಯ ದಿನಾಂಕವಾಗಿದೆ. ಬೇಸಿಗೆ ಹಂಗಾಮಿಗೆ ನೀರಾವರಿ ಶೇಂಗಾ, ಭತ್ತ ಹಾಗೂ ಸೂರ್ಯಕಾಂತಿಗೆ ವಿಮೆ ಕಂತು ತುಂಬಲು ಮಾರ್ಚ್ 1, 2021 ಕೊನೆಯ ದಿನಾಂಕವಾಗಿದೆ ಎಂದು ತಿಳಿಸಿದರು.