ರಾಣೆಬೆನ್ನೂರ ಕಡೆಯಿಂದ ಗುತ್ತಲ ಮಾರ್ಗವಾಗಿ ಆಂಧ್ರಪ್ರದೇಶದ ಅನಂತಪುರ ನಗರದ ಕಸಾಯಿ ಖಾನೆಗೆ ಹೊರಟಿದ್ದ ಲಾರಿಯನ್ನು ಎಂ.ಜಿ ತಿಮ್ಮಾಪುರ ಗ್ರಾಮದ ಹತ್ತಿರ ಪಟ್ಟಣದ ಪಿಎಸ್ಐ ಸಿದ್ದಾರೂಢ ಬಡಿಗೇರ ನೇತೃತ್ವದಲ್ಲಿ ರಕ್ಷಣೆ ಮಾಡಲಾಯಿತು.
ಲಾರಿಯಲ್ಲಿದ್ದ 9 ಕೋಣ, 16 ಎಮ್ಮೆ, ಏಳು ಎತ್ತುಗಳನ್ನು ರಕ್ಷಿಸಲಾಗಿದೆ ಎಂದು ಪಿಎಸ್ಐ ತಿಳಿಸಿದ್ದಾರೆ. ಲಾರಿಯಲ್ಲಿದ್ದ ನಾಲ್ವರನ್ನು ಬಂಧಿಸಲಾಗಿದೆ.
ಎಲ್ಲ ಜಾನುವಾರುಗಳನ್ನು ರಾಣೆಬೆನ್ನೂರಿನಲ್ಲಿ ಖರೀದಿಸಲಾಗಿದೆ ಎನ್ನಲಾಗಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.