<p><strong>ಹಾವೇರಿ: </strong>ಹಾನಗಲ್ ತಾಲ್ಲೂಕಿನ ಆಡೂರ ಸೇರಿ ಸುತ್ತಮುತ್ತಲ ಗ್ರಾಮಗಳ ರೈತರು ‘ಸೀಗೆ ಹುಣ್ಣಿಮೆ’ಯನ್ನು ಶ್ರದ್ಧಾಭಕ್ತಿಯಿಂದ ಗುರುವಾರ ಆಚರಿಸಿದರು.</p>.<p>ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಅನ್ನದಾತರು ಸಂಭ್ರಮದಿಂದ ಭೂದೇವಿಯ ಆರಾಧನೆ ಮಾಡಿದರು.ಪ್ರತಿ ವರ್ಷ ವಿಜಯದಶಮಿ ಬಳಿಕ ಬರುವ ಸೀಗೆ ಹುಣ್ಣಿಮೆಗೆ ಗ್ರಾಮೀಣ ಭಾಗದಲ್ಲಿ ವಿಶೇಷ ಮಹತ್ವ ನೀಡಲಾಗುತ್ತದೆ.</p>.<p>ಇಲ್ಲಿನ ರೈತರು ಸೂರ್ಯೋದಯಕ್ಕೂ ಮುನ್ನವೇ ಜಾನುವಾರುಗಳ ಮೈ ತೊಳೆದು, ಸಿಂಗರಿಸಿ, ಚಕ್ಕಡಿ ಕಟ್ಟಿಕೊಂಡು ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ತಮ್ಮ ಕೃಷಿ ಭೂಮಿಗೆ ತೆರಳಿ, ಭೂಮಾತೆಗೆ ಪೂಜೆ ಸಲ್ಲಿಸುತ್ತಾರೆ. ಭೂಮಿತಾಯಿ ಜತೆಗೆ ಪಂಚ ಪಾಂಡವರನ್ನು ಸ್ಥಾಪಿಸಿ, ಪೂಜೆ ಸಲ್ಲಿಸುವುದು ಈ ಭಾಗದ ವಿಶೇಷ.</p>.<p>ಸೀಗೆ ಹುಣ್ಣಿಮೆಯ ಸಡಗರಕ್ಕಾಗಿಯೇ ಹತ್ತಾರು ಆಹಾರ ಪದಾರ್ಥಗಳು ಸಿದ್ಧಗೊಂಡಿದ್ದವು. ಕಡುಬು, ಖರ್ಜಿಕಾಯಿ, ಹೋಳಿಗೆ, ಎಣಗಾಯಿ ಪಲ್ಯ, ಮಡಕಿಕಾಳು ಪಲ್ಯ... ಮುಂತಾದ ಸಿಹಿ ತಿನಿಸುಗಳನ್ನು ಶಿವಬಸಪ್ಪ ಪೂಜಾರ ಅವರ ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಜತೆಗೂಡಿ ಸಹಭೋಜನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಹಾನಗಲ್ ತಾಲ್ಲೂಕಿನ ಆಡೂರ ಸೇರಿ ಸುತ್ತಮುತ್ತಲ ಗ್ರಾಮಗಳ ರೈತರು ‘ಸೀಗೆ ಹುಣ್ಣಿಮೆ’ಯನ್ನು ಶ್ರದ್ಧಾಭಕ್ತಿಯಿಂದ ಗುರುವಾರ ಆಚರಿಸಿದರು.</p>.<p>ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಅನ್ನದಾತರು ಸಂಭ್ರಮದಿಂದ ಭೂದೇವಿಯ ಆರಾಧನೆ ಮಾಡಿದರು.ಪ್ರತಿ ವರ್ಷ ವಿಜಯದಶಮಿ ಬಳಿಕ ಬರುವ ಸೀಗೆ ಹುಣ್ಣಿಮೆಗೆ ಗ್ರಾಮೀಣ ಭಾಗದಲ್ಲಿ ವಿಶೇಷ ಮಹತ್ವ ನೀಡಲಾಗುತ್ತದೆ.</p>.<p>ಇಲ್ಲಿನ ರೈತರು ಸೂರ್ಯೋದಯಕ್ಕೂ ಮುನ್ನವೇ ಜಾನುವಾರುಗಳ ಮೈ ತೊಳೆದು, ಸಿಂಗರಿಸಿ, ಚಕ್ಕಡಿ ಕಟ್ಟಿಕೊಂಡು ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ತಮ್ಮ ಕೃಷಿ ಭೂಮಿಗೆ ತೆರಳಿ, ಭೂಮಾತೆಗೆ ಪೂಜೆ ಸಲ್ಲಿಸುತ್ತಾರೆ. ಭೂಮಿತಾಯಿ ಜತೆಗೆ ಪಂಚ ಪಾಂಡವರನ್ನು ಸ್ಥಾಪಿಸಿ, ಪೂಜೆ ಸಲ್ಲಿಸುವುದು ಈ ಭಾಗದ ವಿಶೇಷ.</p>.<p>ಸೀಗೆ ಹುಣ್ಣಿಮೆಯ ಸಡಗರಕ್ಕಾಗಿಯೇ ಹತ್ತಾರು ಆಹಾರ ಪದಾರ್ಥಗಳು ಸಿದ್ಧಗೊಂಡಿದ್ದವು. ಕಡುಬು, ಖರ್ಜಿಕಾಯಿ, ಹೋಳಿಗೆ, ಎಣಗಾಯಿ ಪಲ್ಯ, ಮಡಕಿಕಾಳು ಪಲ್ಯ... ಮುಂತಾದ ಸಿಹಿ ತಿನಿಸುಗಳನ್ನು ಶಿವಬಸಪ್ಪ ಪೂಜಾರ ಅವರ ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಜತೆಗೂಡಿ ಸಹಭೋಜನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>