<p><strong>ಹಾನಗಲ್:</strong> ಅಂಗನವಾಡಿ ಯೋಜನೆ ಆರಂಭಗೊಂಡು 50 ವರ್ಷ ಸಂದಿವೆ. ಆದರೆ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಗುರುತಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ತೋರಿವೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದಾ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಇಲ್ಲಿನ ಗುರುಭವನದಲ್ಲಿ ಭಾನುವಾರ ನಡೆದ ತಾಲ್ಲೂಕು ಮಟ್ಟದ ಅಂಗನವಾಡಿ ಕಾಯಕರ್ತೆಯರು ಮತ್ತು ಸಹಾಯಕಿಯರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಗುಜರಾತ ಹೈಕೋರ್ಟ್ ತೀರ್ಪು ಎತ್ತಿ ಹಿಡಿದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು 3 ಮತ್ತು 4 ನೇ ದರ್ಜೆ ನೌಕರರನ್ನಾಗಿ ಖಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಬರುವ ಶೈಕ್ಷಣಿಕ ವರ್ಷದಿಂದ ಎಲ್ಕೆಜಿ ಮತ್ತು ಯುಕೆಜಿ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿ ಜಾರಿಗೊಳಿಸಬೇಕು, ಇದಕ್ಕೆ ತಕ್ಕಂತೆ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಅಂಗವಾಡಿ ಕಾರ್ಯಕರ್ತೆಯರೇ ಇಲ್ಲಿ ಶಿಕ್ಷಕರಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು ಆಗ್ರಹಿಸಿದರು.<br> ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರ ಸ್ಥಿತಿ ಚಿಂತಾಜಕನವಾಗಿದೆ. ಅವರಿಗೆ ಕನಿಷ್ಠ 10 ಸಾವಿರ ರೂ ಮಾಸಿಕ ಸಂಭಾವನೆ ನೀಡಬೇಕು ಎಂದು ಹೇಳಿದರು.</p>.<p>ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದಂತೆ ವೇತನ ಹೆಚ್ಚಳವಾಗಿಲ್ಲ. ಎಲ್ಲ ಬೇಡಿಕೆ ಈಡೇರಿಕೆಗೆ ಮಾರ್ಚ್ 10 ರಂದು ಬೆಂಗಳೂರ ವಿಧಾನಸೌಧ ಚಲೋ ಚಳುವಳಿ ಆಯೋಜಿಸುತ್ತೇವೆ ಎಂದರು.<br> ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ರಾಜೇಶ್ವರಿ ಹಿರೇಮಠ ಮಾತನಾಡಿ, ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಒಗ್ಗಟ್ಟು ಪ್ರದರ್ಶಿಸುವ ಮೂಲಕ ನಮ್ಮ ಬೇಡಿಕೆಗಳ ಹಕ್ಕೋತ್ತಾಯ ಮಾಡಬೇಕು ಎಂದರು.</p>.<p>ಕಾರ್ಯದರ್ಶಿ ಸಿದ್ಧಮ್ಮ ಚೌಟಿ, ಕೋಶಾಧ್ಯಕ್ಷೆ ಸುನಿತಾ ದೊಡ್ಡಮನಿ, ಬ್ಯಾಡಗಿ ತಾಲ್ಲೂಕು ಘಟಕದ ಅಧ್ಯಕ್ಷೆ ಗೌರಮ್ಮ ನಾಯ್ಕರ, ಕಾರ್ಯದರ್ಶಿ ಹೇಮಾ ಎಲಿ, ಕೋಶಾಧ್ಯಕ್ಷೆ ಗೋಜಾ ನಾಯಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್:</strong> ಅಂಗನವಾಡಿ ಯೋಜನೆ ಆರಂಭಗೊಂಡು 50 ವರ್ಷ ಸಂದಿವೆ. ಆದರೆ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಗುರುತಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ತೋರಿವೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದಾ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಇಲ್ಲಿನ ಗುರುಭವನದಲ್ಲಿ ಭಾನುವಾರ ನಡೆದ ತಾಲ್ಲೂಕು ಮಟ್ಟದ ಅಂಗನವಾಡಿ ಕಾಯಕರ್ತೆಯರು ಮತ್ತು ಸಹಾಯಕಿಯರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಗುಜರಾತ ಹೈಕೋರ್ಟ್ ತೀರ್ಪು ಎತ್ತಿ ಹಿಡಿದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು 3 ಮತ್ತು 4 ನೇ ದರ್ಜೆ ನೌಕರರನ್ನಾಗಿ ಖಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಬರುವ ಶೈಕ್ಷಣಿಕ ವರ್ಷದಿಂದ ಎಲ್ಕೆಜಿ ಮತ್ತು ಯುಕೆಜಿ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿ ಜಾರಿಗೊಳಿಸಬೇಕು, ಇದಕ್ಕೆ ತಕ್ಕಂತೆ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಅಂಗವಾಡಿ ಕಾರ್ಯಕರ್ತೆಯರೇ ಇಲ್ಲಿ ಶಿಕ್ಷಕರಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು ಆಗ್ರಹಿಸಿದರು.<br> ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರ ಸ್ಥಿತಿ ಚಿಂತಾಜಕನವಾಗಿದೆ. ಅವರಿಗೆ ಕನಿಷ್ಠ 10 ಸಾವಿರ ರೂ ಮಾಸಿಕ ಸಂಭಾವನೆ ನೀಡಬೇಕು ಎಂದು ಹೇಳಿದರು.</p>.<p>ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದಂತೆ ವೇತನ ಹೆಚ್ಚಳವಾಗಿಲ್ಲ. ಎಲ್ಲ ಬೇಡಿಕೆ ಈಡೇರಿಕೆಗೆ ಮಾರ್ಚ್ 10 ರಂದು ಬೆಂಗಳೂರ ವಿಧಾನಸೌಧ ಚಲೋ ಚಳುವಳಿ ಆಯೋಜಿಸುತ್ತೇವೆ ಎಂದರು.<br> ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ರಾಜೇಶ್ವರಿ ಹಿರೇಮಠ ಮಾತನಾಡಿ, ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಒಗ್ಗಟ್ಟು ಪ್ರದರ್ಶಿಸುವ ಮೂಲಕ ನಮ್ಮ ಬೇಡಿಕೆಗಳ ಹಕ್ಕೋತ್ತಾಯ ಮಾಡಬೇಕು ಎಂದರು.</p>.<p>ಕಾರ್ಯದರ್ಶಿ ಸಿದ್ಧಮ್ಮ ಚೌಟಿ, ಕೋಶಾಧ್ಯಕ್ಷೆ ಸುನಿತಾ ದೊಡ್ಡಮನಿ, ಬ್ಯಾಡಗಿ ತಾಲ್ಲೂಕು ಘಟಕದ ಅಧ್ಯಕ್ಷೆ ಗೌರಮ್ಮ ನಾಯ್ಕರ, ಕಾರ್ಯದರ್ಶಿ ಹೇಮಾ ಎಲಿ, ಕೋಶಾಧ್ಯಕ್ಷೆ ಗೋಜಾ ನಾಯಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>