ದುಂಡಶಿ ಅರಣ್ಯ ವಲಯದಲ್ಲಿ ಬರುವ ಗೌಳಿದಡ್ಡಿ ಗ್ರಾಮದಲ್ಲಿ ಕುಡಿಯುವ ನೀರು, ಬೀದಿ ದೀಪ, ರಸ್ತೆ, ಒಳಚರಂಡಿ ಸೇರಿದಂತೆ ಮೂಲಸೌಕರ್ಯಗಳಿಲ್ಲದೆ ಅಲ್ಲಿನ ನಿವಾಸಿಗಳು ನರಕಯಾತನೆ ಅನುಭವಿಸುತ್ತಿರುವ ಬಗ್ಗೆ ಜುಲೈ 9ರಂದು ‘ಪ್ರಜಾವಾಣಿ’ಯಲ್ಲಿ ‘ಗೌಳಿದಡ್ಡಿ ನಿವಾಸಿಗಳ ಅರಣ್ಯ ರೋದನ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು.