<p><strong>ಹಾವೇರಿ</strong>: ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ದೂದಿಹಳ್ಳಿ ಗ್ರಾಮದ ರಸ್ತೆಯಲ್ಲಿ ಮಹಿಳೆಯೊಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನದ ಸರವನ್ನು ಕಿತ್ತೊಯ್ಯಲಾಗಿದ್ದು, ಈ ಸಂಬಂಧ ಹಿರೇಕೆರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ವಸತಿ ಶಾಲೆಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ 45 ವರ್ಷದ ಮಹಿಳೆಯೊಬ್ಬರು ಕೃತ್ಯದ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ದೂರುದಾರ ಮಹಿಳೆ, ಕೆಲಸಕ್ಕೆಂದು ಸೆ. 20ರಂದು ಸಂಜೆ 5 ಗಂಟೆಗೆ ದೂದಿಹಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಮಳೆ ಬರುತ್ತಿದ್ದರಿಂದ ಕೊಡೆ ಹಿಡಿದುಕೊಂಡಿದ್ದರು. ಅದೇ ರಸ್ತೆಯಲ್ಲಿ ಬಂದಿದ್ದ ಆರೋಪಿ, ಕೊಡೆ ಕಸಿದುಕೊಂಡು ಮುರಿದಿದ್ದ. ನಂತರ, ಕಣ್ಣಿಗೆ ಖಾರದ ಪುಡಿ ಎರಚಿದ್ದ. ನಂತರ, ಮಹಿಳೆಯ ಕೊರಳಲ್ಲಿದ್ದ ₹ 60 ಸಾವಿರ ಮೌಲ್ಯದ 10 ಗ್ರಾಂ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ದೂದಿಹಳ್ಳಿ ಗ್ರಾಮದ ರಸ್ತೆಯಲ್ಲಿ ಮಹಿಳೆಯೊಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನದ ಸರವನ್ನು ಕಿತ್ತೊಯ್ಯಲಾಗಿದ್ದು, ಈ ಸಂಬಂಧ ಹಿರೇಕೆರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ವಸತಿ ಶಾಲೆಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ 45 ವರ್ಷದ ಮಹಿಳೆಯೊಬ್ಬರು ಕೃತ್ಯದ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ದೂರುದಾರ ಮಹಿಳೆ, ಕೆಲಸಕ್ಕೆಂದು ಸೆ. 20ರಂದು ಸಂಜೆ 5 ಗಂಟೆಗೆ ದೂದಿಹಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಮಳೆ ಬರುತ್ತಿದ್ದರಿಂದ ಕೊಡೆ ಹಿಡಿದುಕೊಂಡಿದ್ದರು. ಅದೇ ರಸ್ತೆಯಲ್ಲಿ ಬಂದಿದ್ದ ಆರೋಪಿ, ಕೊಡೆ ಕಸಿದುಕೊಂಡು ಮುರಿದಿದ್ದ. ನಂತರ, ಕಣ್ಣಿಗೆ ಖಾರದ ಪುಡಿ ಎರಚಿದ್ದ. ನಂತರ, ಮಹಿಳೆಯ ಕೊರಳಲ್ಲಿದ್ದ ₹ 60 ಸಾವಿರ ಮೌಲ್ಯದ 10 ಗ್ರಾಂ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>