<p><strong>ತಡಸ:</strong> ಮಕ್ಕಳು ಶೈಕ್ಷಣಿಕ ಪ್ರಗತಿಯ ಜೊತೆಗೆ ದೈಹಿಕ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಿವಬಸವ ಸ್ವಾಮೀಜಿ ಹೇಳಿದರು.</p>.<p>ಗ್ರಾಮದ ಸದ್ಗುರು ಸಿದ್ಧಾರೂಢ ವಿದ್ಯಾಪೀಠ ಹಾಗೂ ದುಂಡಿಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಿಂದ ದುಂಡಿಬಸವೇಶ್ವರ ಪೌಢ ಶಾಲೆಯಲ್ಲಿ ನಡೆದ ಪ್ರಾಥಮಿಕ ಮಟ್ಟದ ತಡಸ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಮಾತನಾಡಿದರು.</p>.<p>ಸಾಮಾಜಿಕ ಮಾಧ್ಯಮಗಳಿಂದ ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಆರೋಗ್ಯವಂತರಾಗಿ ಎಂದರು.</p>.<p>ಸದ್ಗುರು ಸಿದ್ದಾರೂಢ ವಿದ್ಯಾಪೀಠ ಸಂಸ್ಥೆಯ ಅಧ್ಯಕ್ಷ ವಿಠಲ ದುಂಡಪ್ನವರ ಮಾತನಾಡಿ, ಸೋಲು ಗೆಲುವು ಸಮನಾಗಿ ಸ್ವೀಕರಿಸುವ ಮನೋಭಾವ ಮಕ್ಕಳಲ್ಲಿ ಬೆಳೆಯಬೇಕು. ಕ್ರೀಡೆಗಳು ಜೀವನದ ಅವಿಭಾಜ್ಯ ಅಂಗವಾಗಿವೆ ಎಂದರು.</p>.<p>ಸಿಆರ್ಪಿ ಗಂಗಾಧರ ಹಸಬಿ ಮಾತನಾಡಿ, ಶೈಕ್ಷಣಿಕವಾಗಿ ಮಕ್ಕಳು ಬೆಳೆಯುವುದರ ಜೊತೆಗೆ ಕ್ರೀಡಾ ಜಗತ್ತು ವಿಶಾಲವಾಗಿದ್ದು ಮಕ್ಕಳು ಹೆಚ್ಚಿನ ಆಸಕ್ತಿ ವಹಿಸಿ ಉನ್ನತ ಮಟ್ಟದ ಸಾಧನೆ ಮಾಡಲಿ ಎಂದರು.</p>.<p>ಸಿಆರ್ಪಿ ನಾಗರಾಜ ಲಮಾಣಿ, ಪ್ರಕಾಶ ನಿಕಂ, ಈರಪ್ಪ ಗೊಣೆಪ್ಪನವರ, ಬಸವರಾಜ ಶಿರಗುಪ್ಪಿ, ದುಂಡಪ್ಪ ಮಲ್ಲಿಗವಾಡ, ಹಾಗೂ ಶಂಕ್ರಣ ಮಹಾಜನ ಶೆಟ್ಟರ ಹಾಗೂ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಡಸ:</strong> ಮಕ್ಕಳು ಶೈಕ್ಷಣಿಕ ಪ್ರಗತಿಯ ಜೊತೆಗೆ ದೈಹಿಕ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಿವಬಸವ ಸ್ವಾಮೀಜಿ ಹೇಳಿದರು.</p>.<p>ಗ್ರಾಮದ ಸದ್ಗುರು ಸಿದ್ಧಾರೂಢ ವಿದ್ಯಾಪೀಠ ಹಾಗೂ ದುಂಡಿಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಿಂದ ದುಂಡಿಬಸವೇಶ್ವರ ಪೌಢ ಶಾಲೆಯಲ್ಲಿ ನಡೆದ ಪ್ರಾಥಮಿಕ ಮಟ್ಟದ ತಡಸ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಮಾತನಾಡಿದರು.</p>.<p>ಸಾಮಾಜಿಕ ಮಾಧ್ಯಮಗಳಿಂದ ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಆರೋಗ್ಯವಂತರಾಗಿ ಎಂದರು.</p>.<p>ಸದ್ಗುರು ಸಿದ್ದಾರೂಢ ವಿದ್ಯಾಪೀಠ ಸಂಸ್ಥೆಯ ಅಧ್ಯಕ್ಷ ವಿಠಲ ದುಂಡಪ್ನವರ ಮಾತನಾಡಿ, ಸೋಲು ಗೆಲುವು ಸಮನಾಗಿ ಸ್ವೀಕರಿಸುವ ಮನೋಭಾವ ಮಕ್ಕಳಲ್ಲಿ ಬೆಳೆಯಬೇಕು. ಕ್ರೀಡೆಗಳು ಜೀವನದ ಅವಿಭಾಜ್ಯ ಅಂಗವಾಗಿವೆ ಎಂದರು.</p>.<p>ಸಿಆರ್ಪಿ ಗಂಗಾಧರ ಹಸಬಿ ಮಾತನಾಡಿ, ಶೈಕ್ಷಣಿಕವಾಗಿ ಮಕ್ಕಳು ಬೆಳೆಯುವುದರ ಜೊತೆಗೆ ಕ್ರೀಡಾ ಜಗತ್ತು ವಿಶಾಲವಾಗಿದ್ದು ಮಕ್ಕಳು ಹೆಚ್ಚಿನ ಆಸಕ್ತಿ ವಹಿಸಿ ಉನ್ನತ ಮಟ್ಟದ ಸಾಧನೆ ಮಾಡಲಿ ಎಂದರು.</p>.<p>ಸಿಆರ್ಪಿ ನಾಗರಾಜ ಲಮಾಣಿ, ಪ್ರಕಾಶ ನಿಕಂ, ಈರಪ್ಪ ಗೊಣೆಪ್ಪನವರ, ಬಸವರಾಜ ಶಿರಗುಪ್ಪಿ, ದುಂಡಪ್ಪ ಮಲ್ಲಿಗವಾಡ, ಹಾಗೂ ಶಂಕ್ರಣ ಮಹಾಜನ ಶೆಟ್ಟರ ಹಾಗೂ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>