ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೆಣಸಿನಕಾಯಿ ಬೆಳೆ’ ವಿಚಾರ ಸಂಕಿರಣ ಜ.29ರಂದು 

ವಿಜ್ಞಾನಿಗಳಿಂದ ವಿವಿಧ ಗೋಷ್ಠಿಗಳು
Last Updated 20 ಜನವರಿ 2021, 13:29 IST
ಅಕ್ಷರ ಗಾತ್ರ

ಹಾವೇರಿ: ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ದೇವಿಹೊಸೂರು ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಲ್ಲಿ ಜ.29ರಂದು ಒಂದು ದಿನದ ‘ರಾಜ್ಯ ಮಟ್ಟದ ಮೆಣಸಿನಕಾಯಿ ಬೆಳೆಯ ವಿಚಾರ ಸಂಕಿರಣ’ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಹಮ್ಮಿಕೊಳ್ಳಲಾಗಿದೆ.

ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎ.ಎಸ್. ಜಯರಾಮ್ (ಮಸಾಲ ಜಯರಾಮ್) ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಬಾಗಲಕೋಟೆ ತೋಟಗಾರಿಕಾ ವಿ.ವಿ. ಕುಲಪತಿ ಡಾ.ಕೆ.ಎಂ. ಇಂದಿರೇಶ್ ವಹಿಸಲಿದ್ದಾರೆ. ಅತಿಥಿಗಳಾಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭಾಗವಹಿಸಲಿದ್ದಾರೆ.

ವಿಚಾರ ಸಂಕಿರಣದಲ್ಲಿ ಮೆಣಸಿನಕಾಯಿಯ ವಿವಿಧ ತಳಿಗಳ ಮಾಹಿತಿ, ಉತ್ಪಾದನಾ ತಾಂತ್ರಿಕತೆಗಳು, ರೋಗ ಮತ್ತು ಕೀಟ ಹತೋಟಿ, ಕೊಯ್ಲೋತ್ತರ ತಂತ್ರಜ್ಞಾನಗಳು ಮತ್ತು ಮಾರುಕಟ್ಟೆ ಮಾಹಿತಿಗಳನ್ನು ಗೋಷ್ಠಿಗಳಲ್ಲಿ ವಿವಿಧ ವಿಜ್ಞಾನಿಗಳು ಮಂಡಿಸಲಿದ್ದಾರೆ.

ವಿಚಾರ ಸಂಕಿರಣದಲ್ಲಿ ರಾಜ್ಯದ ಮೆಣಸಿನಕಾಯಿ ಬೆಳೆಯುವ ಮತ್ತು ಬೆಳೆಯಲಿಚ್ಛಿಸಿರುವ ರೈತರು ಮತ್ತು ಮೆಣಸಿನಕಾಯಿ ವಾಪಾರಸ್ಥರು ದೇವಿಹೊಸೂರು ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಭೇಟಿ ನೀಡಿ ಮುಖ್ಯಸ್ಥರಲ್ಲಿ ನೋಂದಣಿ ಮಾಡಿಸಬಹುದು. ಮಾಹಿತಿಗೆ ದೂ: 80739 68654, 86186 93533 ಸಂಪರ್ಕಿಸಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT