ನಂತರ ಶಾಸಕ ನೆಹರು ಓಲೇಕಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಅನ್ಯಾಯವಾಗಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಮುಂದೆ ಅವಕಾಶ ಮಾಡಿಕೊಡುತ್ತೇನೆ, ಸಹಕಾರ ನೀಡಿ ಎಂದು ಮುಖ್ಯಮಂತ್ರಿ ಕೇಳಿಕೊಂಡಿದ್ದಾರೆ. ಮೊದಲಿನಿಂದಲೂ ನಾನು ಸಹಕಾರ ನೀಡುತ್ತಲೇ ಬಂದಿದ್ದೇನೆ. ಸಿ.ಎಂ ಮತ್ತು ನಾನು ಸವಣೂರು ಕ್ಷೇತ್ರವನ್ನು ಹಂಚಿಕೊಂಡಿದ್ದರೂ ಯಾವುದೇ ವಿವಾದ, ಭಿನ್ನಾಭಿಪ್ರಾಯ ಇದುವರೆಗೂ ಬಂದಿಲ್ಲ’ ಎಂದು ಹೇಳಿದರು.