<p><strong>ಹಾವೇರಿ</strong>: ‘ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣಾ ಹಿನ್ನೆಲೆಯಲ್ಲಿ ಜಾರಿಗೊಂಡಿರುವ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗದಂತೆ ತೀವ್ರ ನಿಗಾ ವಹಿಸಿ’ ಎಂದು ತಹಶೀಲ್ದಾರ್ಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ಸೂಚಿಸಿದರು.</p>.<p>ಕರ್ನಾಟಕ ಪಶ್ಚಿಮ ಪದವೀಧರರ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತದೊಂದಿಗೆ ಸೋಮವಾರ ವಿಡಿಯೊ ಸಂವಾದ ನಡೆಸಿ ತಾಲ್ಲೂಕುವಾರು ತಹಶೀಲ್ದಾರರು, ಮುದ್ರಕರು, ಕೇಬಲ್ ಟೀವಿ ಪ್ರಸಾರಕರು ಹಾಗೂ ವಾಣಿಜ್ಯೋದ್ಯಮಗಳೊಂದಿಗೆ ಅವರು ಮಾತನಾಡಿದರು.</p>.<p>ಚುನಾವಣಾ ಪ್ರಚಾರ ಸಾಮಗ್ರಿಗಳ ಮುದ್ರಣ, ವಿದ್ಯುನ್ಮಾನ ಹಾಗೂ ಮುದ್ರಣ ಮಾಧ್ಯಮ ಜಾಹೀರಾತು ಪ್ರಕಟಣೆ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಪ್ರಸಾರ, ಚುನಾವಣಾ ಪ್ರಚಾರ, ಸಭೆ ಸಮಾರಂಭಗಳಿಗೆ ಸಮುದಾಯ ಭವನ, ಕಲ್ಯಾಣ ಮಂಟಪ, ಸಭಾಂಗಣ ಬಾಡಿಗೆ ಕೊಡುವ ಮುನ್ನ ಹಾಗೂ ಸಭೆ ಸಮಾರಂಭಗಳನ್ನು ನಡೆಸುವ ಮುನ್ನ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಈ ಕುರಿತಂತೆ ಸಂಬಂಧಿಸಿದವರ ಸಭೆ ನಡೆಸಿ ಮಾಹಿತಿ ನೀಡಲು ಸೂಚನೆ ನೀಡಿದರು.</p>.<p>ಚುನಾವಣೆಗೆ ಸಂಬಂಧಿಸಿದ ಜಾಹೀರಾತು ಪ್ರಕಟಣೆ ಮುನ್ನ ಜಿಲ್ಲಾ ಎಂ.ಸಿ.ಎಂ.ಸಿ ಸಮಿತಿಯಿಂದ ಅನುಮತಿ ಪಡೆಯಬೇಕು. ಟಿ.ವಿ ಕೇಬಲ್ಗಳಲ್ಲಿ ಪ್ರಸಾರವಾಗುವ ರಾಜಕೀಯ, ಸಂದರ್ಶನ, ಜಾಹೀರಾತು ಹಾಗೂ ಸ್ಕ್ರೋಲಿಂಗ್ಗಳ ಪ್ರಸಾರಕ್ಕೆ ಮುನ್ನ ಪೂರ್ವಾನುಮತಿ ಪಡೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.</p>.<p class="Subhead"><strong>ಹೊಸ ಕಾಮಗಾರಿ ಇಲ್ಲ:</strong></p>.<p>ಯಾವುದೇ ಹೊಸ ಕಾಮಗಾರಿಗಳನ್ನು ಆರಂಭಿಸುವಂತಿಲ್ಲ. ಹೊಸ ಯೋಜನೆಗಳನ್ನು ಘೋಷಿಸುವಂತಿಲ್ಲ. ಸಚಿವರು, ಶಾಸಕರು ನಡೆಸುವ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸುವಂತಿಲ್ಲ. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಆಯ್ಕೆ ಮಾಡುವಂತಿಲ್ಲ. ಆದರೆ ಈಗಾಗಲೇ ಕಾಮಗಾರಿಗಳು ಆರಂಭಗೊಂಡಿದ್ದರೆ ಮುಂದುವರಿಸಬಹುದು, ಕೆ.ಡಿ.ಪಿ, ಜಿಲ್ಲಾ ಪಂಚಾಯಿತಿ ಸಭೆಗಳನ್ನು ನಡೆಸಬಹುದು. ಆದರೆ ಹೊಸ ನಿರ್ಣಯಗಳನ್ನು ತೆಗೆದುಕೊಳ್ಳುವಂತಿಲ್ಲ, ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ತೀರ್ಮಾನ ಹಾಗೂ ಚಟುವಟಿಕೆಗಳನ್ನು ನಡಸಬಾರದು ಎಂದು ಸೂಚನೆ ನೀಡಿದರು.</p>.<p>ಸಭೆಯಲ್ಲಿ ಚುನಾವಣಾ ತಹಶೀಲ್ದಾರ್ ಪ್ರಶಾಂತ ನಾಲವಾರ್, ಹಾವೇರಿ ತಹಶೀಲ್ದಾರ್ ಶಂಕರ, ವಾರ್ತಾಧಿಕಾರಿ ರಂಗನಾಥ ಬಿ.ಆರ್, ವಿಡಿಯೊ ಸಂವಾದದ ಮೂಲಕ ವಿವಿಧ ತಾಲ್ಲೂಕು ತಹಶೀಲ್ದಾರ್ಗಳು, ಉಪವಿಭಾಗಾಧಿಕಾರಿಗಳು, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣಾ ಹಿನ್ನೆಲೆಯಲ್ಲಿ ಜಾರಿಗೊಂಡಿರುವ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗದಂತೆ ತೀವ್ರ ನಿಗಾ ವಹಿಸಿ’ ಎಂದು ತಹಶೀಲ್ದಾರ್ಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ಸೂಚಿಸಿದರು.</p>.<p>ಕರ್ನಾಟಕ ಪಶ್ಚಿಮ ಪದವೀಧರರ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತದೊಂದಿಗೆ ಸೋಮವಾರ ವಿಡಿಯೊ ಸಂವಾದ ನಡೆಸಿ ತಾಲ್ಲೂಕುವಾರು ತಹಶೀಲ್ದಾರರು, ಮುದ್ರಕರು, ಕೇಬಲ್ ಟೀವಿ ಪ್ರಸಾರಕರು ಹಾಗೂ ವಾಣಿಜ್ಯೋದ್ಯಮಗಳೊಂದಿಗೆ ಅವರು ಮಾತನಾಡಿದರು.</p>.<p>ಚುನಾವಣಾ ಪ್ರಚಾರ ಸಾಮಗ್ರಿಗಳ ಮುದ್ರಣ, ವಿದ್ಯುನ್ಮಾನ ಹಾಗೂ ಮುದ್ರಣ ಮಾಧ್ಯಮ ಜಾಹೀರಾತು ಪ್ರಕಟಣೆ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಪ್ರಸಾರ, ಚುನಾವಣಾ ಪ್ರಚಾರ, ಸಭೆ ಸಮಾರಂಭಗಳಿಗೆ ಸಮುದಾಯ ಭವನ, ಕಲ್ಯಾಣ ಮಂಟಪ, ಸಭಾಂಗಣ ಬಾಡಿಗೆ ಕೊಡುವ ಮುನ್ನ ಹಾಗೂ ಸಭೆ ಸಮಾರಂಭಗಳನ್ನು ನಡೆಸುವ ಮುನ್ನ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಈ ಕುರಿತಂತೆ ಸಂಬಂಧಿಸಿದವರ ಸಭೆ ನಡೆಸಿ ಮಾಹಿತಿ ನೀಡಲು ಸೂಚನೆ ನೀಡಿದರು.</p>.<p>ಚುನಾವಣೆಗೆ ಸಂಬಂಧಿಸಿದ ಜಾಹೀರಾತು ಪ್ರಕಟಣೆ ಮುನ್ನ ಜಿಲ್ಲಾ ಎಂ.ಸಿ.ಎಂ.ಸಿ ಸಮಿತಿಯಿಂದ ಅನುಮತಿ ಪಡೆಯಬೇಕು. ಟಿ.ವಿ ಕೇಬಲ್ಗಳಲ್ಲಿ ಪ್ರಸಾರವಾಗುವ ರಾಜಕೀಯ, ಸಂದರ್ಶನ, ಜಾಹೀರಾತು ಹಾಗೂ ಸ್ಕ್ರೋಲಿಂಗ್ಗಳ ಪ್ರಸಾರಕ್ಕೆ ಮುನ್ನ ಪೂರ್ವಾನುಮತಿ ಪಡೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.</p>.<p class="Subhead"><strong>ಹೊಸ ಕಾಮಗಾರಿ ಇಲ್ಲ:</strong></p>.<p>ಯಾವುದೇ ಹೊಸ ಕಾಮಗಾರಿಗಳನ್ನು ಆರಂಭಿಸುವಂತಿಲ್ಲ. ಹೊಸ ಯೋಜನೆಗಳನ್ನು ಘೋಷಿಸುವಂತಿಲ್ಲ. ಸಚಿವರು, ಶಾಸಕರು ನಡೆಸುವ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸುವಂತಿಲ್ಲ. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಆಯ್ಕೆ ಮಾಡುವಂತಿಲ್ಲ. ಆದರೆ ಈಗಾಗಲೇ ಕಾಮಗಾರಿಗಳು ಆರಂಭಗೊಂಡಿದ್ದರೆ ಮುಂದುವರಿಸಬಹುದು, ಕೆ.ಡಿ.ಪಿ, ಜಿಲ್ಲಾ ಪಂಚಾಯಿತಿ ಸಭೆಗಳನ್ನು ನಡೆಸಬಹುದು. ಆದರೆ ಹೊಸ ನಿರ್ಣಯಗಳನ್ನು ತೆಗೆದುಕೊಳ್ಳುವಂತಿಲ್ಲ, ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ತೀರ್ಮಾನ ಹಾಗೂ ಚಟುವಟಿಕೆಗಳನ್ನು ನಡಸಬಾರದು ಎಂದು ಸೂಚನೆ ನೀಡಿದರು.</p>.<p>ಸಭೆಯಲ್ಲಿ ಚುನಾವಣಾ ತಹಶೀಲ್ದಾರ್ ಪ್ರಶಾಂತ ನಾಲವಾರ್, ಹಾವೇರಿ ತಹಶೀಲ್ದಾರ್ ಶಂಕರ, ವಾರ್ತಾಧಿಕಾರಿ ರಂಗನಾಥ ಬಿ.ಆರ್, ವಿಡಿಯೊ ಸಂವಾದದ ಮೂಲಕ ವಿವಿಧ ತಾಲ್ಲೂಕು ತಹಶೀಲ್ದಾರ್ಗಳು, ಉಪವಿಭಾಗಾಧಿಕಾರಿಗಳು, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>