ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಣೆಬೆನ್ನೂರು | ರಸ್ತೆ ವಿಭಜಕಕ್ಕೆ ಡಿಕ್ಕಿ: ಬೈಕ್‌ ಸವಾರ ಸಾವು

Published 14 ಮೇ 2024, 16:07 IST
Last Updated 14 ಮೇ 2024, 16:07 IST
ಅಕ್ಷರ ಗಾತ್ರ

ರಾಣೆಬೆನ್ನೂರು: ಬೈಕ್ ಸವಾರನೊಬ್ಬ ತಾಲ್ಲೂಕಿನ ಅಸುಂಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಈಚೆಗೆ ನಡೆದಿದೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ತೇರದಾಳ ಗ್ರಾಮದ ಮಂಜುನಾಥ ಕಾಶೀನಾಥ ತಂಗಡಿ (36) ಮೃತರು.

ತೀವ್ರ ಗಾಯಗೊಂಡಿದ್ದ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೇ 13ರಂದು ಪ್ರಕರಣ ದಾಖಲಾಗಿದೆ.

ಮಂಜುನಾಥ ಅವರು ಕೆಲಸದ ಹಿನ್ನೆಲೆಯಲ್ಲಿ ಹುಬ್ಬಳ್ಳಿ, ದಾವಣಗೆರೆಗೆ ಹೋಗಿ ಹಿಂದಿರುಗುವಾಗ ಘಟನೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT