ಯುವ ಮುಖಂಡ ಮಾರುತಿ ಇಂಗಳಕಿ ಮಾತನಾಡಿ, ಹಾನಗಲ್ ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಶಾಸಕ ಶ್ರೀನಿವಾಸ ಮಾನೆ ಪಣ ತೊಟ್ಟಿದ್ದಾರೆ. ತಾಲ್ಲೂಕಿನಲ್ಲಿ ಯಾವುದೇ ಸರ್ಕಾರಿ ಶಾಲೆಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಅಲ್ಲಿನ ಎಸ್ಡಿಎಂಸಿ ಸದಸ್ಯರು, ಗ್ರಾಮಸ್ಥರು, ಹಳೇ ವಿದ್ಯಾರ್ಥಿಗಳು ಸೇರಿಕೊಂಡು ಸಂಗ್ರಹಿಸುವ ಹಣಕ್ಕೆ ಸರಿಸಮನಾಗಿ ಅಷ್ಟೇ ಹಣವನ್ನು ಮಾನೆ ಅವರೂ ವೈಯಕ್ತಿಕವಾಗಿ ನೀಡುತ್ತಿದ್ದಾರೆ ಎಂದು ತಿಳಿಸಿದರು.