ಶಾಸಕರು ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದು, ಜನತೆ ಶಾಸಕರ ಬಗ್ಗೆ ರೋಸಿಹೋಗಿದ್ದಾರೆ. ಅಧಿಕಾರಿಗಳು ಕಡತಗಳನ್ನು ಹಿಡಿದುಕೊಂಡು ಶಾಸಕರಿಗಾಗಿ ಕಾಯುತ್ತಿದ್ದಾರೆ.ಕ್ಷೇತ್ರದ ಅಭಿವೃದ್ದಿ ಕುಂಠಿತವಾಗಿದೆ. ತಾಲ್ಲೂಕಿನ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆ ನಡೆದಿಲ್ಲ. ತಾಲ್ಲೂಕು ಬರಗಾಲ ಪೀಡಿತವಾಗಿದ್ದರೂ, ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆದಿಲ್ಲ. ಕುಡಿಯುವ ನೀರಿನ ಸಮಸ್ಯೆಯಿಂದ ಜನತೆ ಕಂಗಾಲಾಗಿದ್ದಾರೆ. ಕೆಲಸ ಇಲ್ಲದೇ ಗುಳೆ ಹೋಗುವಂತಾಗಿದೆ. ಹೀಗಾಗಿ, ಪೊಲೀಸರು ಶಾಸಕರನ್ನು ಹುಡುಕಿಕೊಟ್ಟರೆ ಅನುಕೂಲವಾಗುತ್ತದೆ. ದಯವಿಟ್ಟು ಪೊಲೀಸರು ನಮ್ಮ ದೂರನ್ನು ನಿರ್ಲಕ್ಷಿಸದೇ ಶಾಸಕರನ್ನು ಹುಡುಕಿ ಕೊಡಬೇಕೆಂದು ಮನವಿ ಮಾಡಿದ್ದಾರೆ.