2019-20ನೇ ಸಾಲಿನಲ್ಲಿ ಬೆಳೆ ಪರಿಹಾರ ವಿತರಣೆಯಲ್ಲಿ ನಡೆದಿರುವ ಲೋಪ ಕುರಿತಂತೆ ಕೈಗೊಂಡಿರುವ ಪೊಲೀಸ್ ತನಿಖೆಯ ಪ್ರಗತಿಯ ಮಾಹಿತಿ ಪಡೆದ ಗೃಹ ಸಚಿವರು ತ್ವರಿತವಾಗಿ ತನಿಖಾ ಕಾರ್ಯ ಪೂರ್ಣ ಗೊಳಿಸಿ. ಅರ್ಹರಿಗೆ ಪರಿಹಾರ ವಿತರಣೆಗೆ ಅನುಕೂಲವಾಗಲಿದೆ. ತನಿಖೆಯ ವಿಳಂಬದಿಂದ ಅಂದಾಜು 10 ಸಾವಿರ ರೈತರ ಪರಿಹಾರ ಪಡೆಯುವಲ್ಲಿ ವಿಳಂಬವಾಗಿದೆ. ತನಿಖೆ ಆದಷ್ಟು ಬೇಗ ಪೂರ್ಣಗೊಳಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.