ಹಾವೇರಿ: ರಾಜ್ಯ ಸರ್ಕಾರ ವಿದ್ಯುತ್ ಏರಿಕೆ ಮಾಡಿರುವುದನ್ನು ಖಂಡಿಸಿ,ಸಮತಾ ಸೈನಿಕ ದಳ ಅಠವಳೆ ಹಾವೇರಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಕಾರ್ಯಾಲಯದಲ್ಲಿ ಸಾಂಕೇತಿಕ ಧರಣಿ ನಡೆಸಲಾಯಿತು.
ಬೆಳಗಾವಿ ವಿಭಾಗೀಯ ಸಮಿತಿ ಅಧ್ಯಕ್ಷ ಎನ್.ಎನ್. ಗಾಳೆಮ್ಮನವರ ಮಾತನಾಡಿ, ‘ಈಗಾಗಲೇ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ. ಕೇಂದ್ರ ಸರ್ಕಾರ ರೈತರ ಪರವಾಗಿ ಯಾವುದೇ ಕಾನೂನು ರೂಪಿಸಿಲ್ಲ. ಕಳಪೆ ಬಿತ್ತನೆ ಬೀಜಗಳ ಹಾವಳಿಯಿಂದ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.