<p><strong>ಹಾವೇರಿ</strong>: ರಾಜ್ಯ ಸರ್ಕಾರ ವಿದ್ಯುತ್ ಏರಿಕೆ ಮಾಡಿರುವುದನ್ನು ಖಂಡಿಸಿ,ಸಮತಾ ಸೈನಿಕ ದಳ ಅಠವಳೆ ಹಾವೇರಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಕಾರ್ಯಾಲಯದಲ್ಲಿ ಸಾಂಕೇತಿಕ ಧರಣಿ ನಡೆಸಲಾಯಿತು.</p>.<p>ಬೆಳಗಾವಿ ವಿಭಾಗೀಯ ಸಮಿತಿ ಅಧ್ಯಕ್ಷ ಎನ್.ಎನ್. ಗಾಳೆಮ್ಮನವರ ಮಾತನಾಡಿ, ‘ಈಗಾಗಲೇ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ. ಕೇಂದ್ರ ಸರ್ಕಾರ ರೈತರ ಪರವಾಗಿ ಯಾವುದೇ ಕಾನೂನು ರೂಪಿಸಿಲ್ಲ. ಕಳಪೆ ಬಿತ್ತನೆ ಬೀಜಗಳ ಹಾವಳಿಯಿಂದ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ವಕೀಲ ಸತೀಶ ಕಾಟೇನಹಳ್ಳಿ, ಸುಶೀಲಾ ಕೋಮನಾಳ, ಮೆಹರ ನಿಗಾರ್, ಭಾಗ್ಯಮ್ಮ ಮಂಜೂಳಕರ, ಯಲ್ಲವ್ವ ಬಂಡಿವಡ್ಡರ, ಲಕ್ಷಮ್ಮ ಕೊರಿಪು, ಬಸಯ್ಯ ಹಿರೇಮಠ, ವನಜಾಕ್ಷಿ ಹಳೂರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ರಾಜ್ಯ ಸರ್ಕಾರ ವಿದ್ಯುತ್ ಏರಿಕೆ ಮಾಡಿರುವುದನ್ನು ಖಂಡಿಸಿ,ಸಮತಾ ಸೈನಿಕ ದಳ ಅಠವಳೆ ಹಾವೇರಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಕಾರ್ಯಾಲಯದಲ್ಲಿ ಸಾಂಕೇತಿಕ ಧರಣಿ ನಡೆಸಲಾಯಿತು.</p>.<p>ಬೆಳಗಾವಿ ವಿಭಾಗೀಯ ಸಮಿತಿ ಅಧ್ಯಕ್ಷ ಎನ್.ಎನ್. ಗಾಳೆಮ್ಮನವರ ಮಾತನಾಡಿ, ‘ಈಗಾಗಲೇ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ. ಕೇಂದ್ರ ಸರ್ಕಾರ ರೈತರ ಪರವಾಗಿ ಯಾವುದೇ ಕಾನೂನು ರೂಪಿಸಿಲ್ಲ. ಕಳಪೆ ಬಿತ್ತನೆ ಬೀಜಗಳ ಹಾವಳಿಯಿಂದ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ವಕೀಲ ಸತೀಶ ಕಾಟೇನಹಳ್ಳಿ, ಸುಶೀಲಾ ಕೋಮನಾಳ, ಮೆಹರ ನಿಗಾರ್, ಭಾಗ್ಯಮ್ಮ ಮಂಜೂಳಕರ, ಯಲ್ಲವ್ವ ಬಂಡಿವಡ್ಡರ, ಲಕ್ಷಮ್ಮ ಕೊರಿಪು, ಬಸಯ್ಯ ಹಿರೇಮಠ, ವನಜಾಕ್ಷಿ ಹಳೂರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>