ಮುಂದಿನ ಸಾಹಿತ್ಯ ಸಮ್ಮೇಳನದ ಸ್ಥಳ ನಿರ್ಧರಿಸಲು ಸಭೆ ಸೇರಲಾಗಿತ್ತು. ಸಭೆಯಲ್ಲಿ ಬಳ್ಳಾರಿ, ಯಾದಗಿರಿ, ಉತ್ತರ ಕನ್ನಡ, ಮಂಡ್ಯ, ಹಾಸನ, ಚಿಕ್ಕಮಗಳೂರು ಸೇರಿದಂತೆ ಒಟ್ಟು ಆರು ಜಿಲ್ಲೆಯವರು ತಮ್ಮ ಜಿಲ್ಲೆಗಳಲ್ಲಿ ಸಮ್ಮೇಳನ ಸಂಘಟಿಸಬೇಕೆಂದು ಹಕ್ಕು ಮಂಡಿಸಿದರು. ಆದರೆ, ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಮಹೇಶ ಜೋಶಿ, ನನಗೆ ಒಂದು ತಿಂಗಳ ಕಾಲಾವಕಾಶ ಕೊಡಿ. ಅನಂತರ ನಿರ್ಧಾರ ಕೈಗೊಳ್ಳೋಣ ಎಂದರು.