<p>ಹಾನಗಲ್: ‘ಉದಾಸಿ ಕುಟುಂಬಕ್ಕೆ ಟಿಕೆಟ್ ಕೈತಪ್ಪಿದ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಅಪಪ್ರಚಾರದಲ್ಲಿ ತೊಡಗಿದೆ. ಸಿ.ಎಂ.ಉದಾಸಿ ಆಪ್ತರಾಗಿ ಶಿವರಾಜ ಸಜ್ಜನರ ರಾಜಕಾರಣದಲ್ಲಿ ಬೆಳೆದವರು. ನಮ್ಮ ಕುಟುಂಬದ ಸದಸ್ಯರಾಗಿ ಶಿವರಾಜ ಸಜ್ಜನರ ನಡೆದುಕೊಂಡಿದ್ದಾರೆ’ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.</p>.<p>ಭಾನುವಾರ ತಾಲ್ಲೂಕಿನ ಬೈಚವಳ್ಳಿ ಗ್ರಾಮದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರ ರಕ್ಷಣೆಗಾಗಿ ನಮ್ಮದೇ ಶಾಸಕರು ಆಯ್ಕೆಗೊಳ್ಳಬೇಕು. ಸಂಸದನಾಗಿ ನಾನು ನಿಮ್ಮೊಂದಿಗೆ ಇರುತ್ತೇನೆ ಎಂದರು.</p>.<p>ಬಿಜೆಪಿ ಕಾರ್ಯಕರ್ತರಲ್ಲಿ ಈ ಚುನಾವಣೆ ಗೆಲ್ಲಬೇಕು ಎಂಬ ಹಂಬಲ ಹೆಚ್ಚುತ್ತಿದೆ. ಇದು ಟ್ರೇಲರ್, ಇನ್ಮುಂದೆ ಪಿಚ್ಚರ್ ಶುರುವಾಗಲಿದೆ. ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾಮಾಗಾರಿಗಳು ಬಿಜೆಪಿ ಬೆಂಬಲಿಸಲು ಕಾರಣವಾಗಲಿದೆ ಎಂದರು.<br />ಸ್ವಾತಂತ್ರ್ಯ ನಂತರ ಕಾಂಗ್ರೆಸ್ ವಿಸರ್ಜನೆಯಾಗಬೇಕು, ಕಾಂಗ್ರೆಸ್ ಹೆಸರಿನಲ್ಲಿ ಚುನಾವಣೆ ಬೇಡ ಎಂಬುದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅನಿಸಿಕೆಯಾಗಿತ್ತು. ಅದು ಈಗ ನಿಜವಾಗುತ್ತಿದೆ. ಅಭಿವೃದ್ಧಿ ವಿರೋಧಿಯಾಗಿ ಕಾಂಗ್ರೆಸ್ ಕಂಗೊಳಿಸುತ್ತಿದೆ. ಪ್ರಗತಿಗೆ ಪೂರಕವಾಗಿ ಬಿಜೆಪಿ ಬೆಳೆದಿದೆ ಎಂದರು.</p>.<p>ಅಭ್ಯರ್ಥಿ ಶಿವರಾಜ ಸಜ್ಜನವರ ಮಾತನಾಡಿ, ರಾಜಕೀಯ ರಂಗಕ್ಕೆ ಸಿ.ಎಂ.ಉದಾಸಿ ಅವರು ನನ್ನನ್ನು ಕೈಹಿಡಿ ಕರೆತಂದವರು, ಸಿ.ಎಂ.ಉದಾಸಿ ಶಿಷ್ಯನಾಗಿ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ಕ್ಷೇತ್ರದ ಜನರ ಹಿತರಕ್ಷಣೆಗಾಗಿ ಸಂಸದ ಶಿವಕುಮಾರ ಉದಾಸಿ ಅವರು ನಮ್ಮೊಂದಿಗೆ ಇರುತ್ತಾರೆ ಎಂದರು.</p>.<p>ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ ಮಾತನಾಡಿ, ಈ ಅವಧಿಯಲ್ಲಿ ಒಬ್ಬ ಶಾಸಕನಾಗಿ ಸಿ.ಎಂ.ಉದಾಸಿ ಕ್ಷೇತ್ರದ ಅಭಿವೃದ್ಧಿಗೆ ಬಹಳಷ್ಟು ಅನುದಾನ ತಂದಿದ್ದಾರೆ. ಬೆಳೆವಿಮೆ ಪರಿಹಾರ ಪಡೆಯುವಲ್ಲಿ ದೇಶದಲ್ಲಿ ಹಾನಗಲ್ ತಾಲ್ಲೂಕು ಹೆಸರಾಗಿದೆ. ಇದಕ್ಕೆ ಸಿ.ಎಂ.ಉದಾಸಿ ಕಾರಣ ಎಂದರು.</p>.<p>ಸುರಪೂರ ಶಾಸಕ ರಾಜು ಗೌಡ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ರಾಜ್ಯದ ಮುಖ್ಯಮಂತ್ರಿ ಈ ಜಿಲ್ಲೆಯವರು. ಇದೇ ತಾಲ್ಲೂಕಿನ ಅಳಿಯ ಅವರು. ಅಲ್ಲದೆ, ರಾಜ್ಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಸಿ.ಎಂ.ಉದಾಸಿ ಪ್ರತಿನಿಧಿಸುವ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬೇಕು ಎಂದು ಮನವಿ ಮಾಡಿದರು.</p>.<p>ಬ್ಯಾಡಗಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ನಿಂಗಪ್ಪ ಗೊಬ್ಬೇರ, ಮುಖಂಡರಾದ ಕಲ್ಯಾಣಕುಮಾರ ಶೆಟ್ಟರ, ಭೋಜರಾಜ ಕರೂದಿ, ಪದ್ಮನಾಭ ಕುಂದಾಪೂರ, ರವಿ ಪಾಟೀಲ, ಶಿವಾಜಿ ಸಾಳುಂಕೆ, ಶಿವಲಿಂಗಪ್ಪ ತಲ್ಲೂರ, ಡಾ.ಸುನಿಲ ಹಿರೇಮಠ, ರಾಜು ಹೊಸಕೇರಿ ತಿಮ್ಮಾಪೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾನಗಲ್: ‘ಉದಾಸಿ ಕುಟುಂಬಕ್ಕೆ ಟಿಕೆಟ್ ಕೈತಪ್ಪಿದ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಅಪಪ್ರಚಾರದಲ್ಲಿ ತೊಡಗಿದೆ. ಸಿ.ಎಂ.ಉದಾಸಿ ಆಪ್ತರಾಗಿ ಶಿವರಾಜ ಸಜ್ಜನರ ರಾಜಕಾರಣದಲ್ಲಿ ಬೆಳೆದವರು. ನಮ್ಮ ಕುಟುಂಬದ ಸದಸ್ಯರಾಗಿ ಶಿವರಾಜ ಸಜ್ಜನರ ನಡೆದುಕೊಂಡಿದ್ದಾರೆ’ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.</p>.<p>ಭಾನುವಾರ ತಾಲ್ಲೂಕಿನ ಬೈಚವಳ್ಳಿ ಗ್ರಾಮದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರ ರಕ್ಷಣೆಗಾಗಿ ನಮ್ಮದೇ ಶಾಸಕರು ಆಯ್ಕೆಗೊಳ್ಳಬೇಕು. ಸಂಸದನಾಗಿ ನಾನು ನಿಮ್ಮೊಂದಿಗೆ ಇರುತ್ತೇನೆ ಎಂದರು.</p>.<p>ಬಿಜೆಪಿ ಕಾರ್ಯಕರ್ತರಲ್ಲಿ ಈ ಚುನಾವಣೆ ಗೆಲ್ಲಬೇಕು ಎಂಬ ಹಂಬಲ ಹೆಚ್ಚುತ್ತಿದೆ. ಇದು ಟ್ರೇಲರ್, ಇನ್ಮುಂದೆ ಪಿಚ್ಚರ್ ಶುರುವಾಗಲಿದೆ. ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾಮಾಗಾರಿಗಳು ಬಿಜೆಪಿ ಬೆಂಬಲಿಸಲು ಕಾರಣವಾಗಲಿದೆ ಎಂದರು.<br />ಸ್ವಾತಂತ್ರ್ಯ ನಂತರ ಕಾಂಗ್ರೆಸ್ ವಿಸರ್ಜನೆಯಾಗಬೇಕು, ಕಾಂಗ್ರೆಸ್ ಹೆಸರಿನಲ್ಲಿ ಚುನಾವಣೆ ಬೇಡ ಎಂಬುದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅನಿಸಿಕೆಯಾಗಿತ್ತು. ಅದು ಈಗ ನಿಜವಾಗುತ್ತಿದೆ. ಅಭಿವೃದ್ಧಿ ವಿರೋಧಿಯಾಗಿ ಕಾಂಗ್ರೆಸ್ ಕಂಗೊಳಿಸುತ್ತಿದೆ. ಪ್ರಗತಿಗೆ ಪೂರಕವಾಗಿ ಬಿಜೆಪಿ ಬೆಳೆದಿದೆ ಎಂದರು.</p>.<p>ಅಭ್ಯರ್ಥಿ ಶಿವರಾಜ ಸಜ್ಜನವರ ಮಾತನಾಡಿ, ರಾಜಕೀಯ ರಂಗಕ್ಕೆ ಸಿ.ಎಂ.ಉದಾಸಿ ಅವರು ನನ್ನನ್ನು ಕೈಹಿಡಿ ಕರೆತಂದವರು, ಸಿ.ಎಂ.ಉದಾಸಿ ಶಿಷ್ಯನಾಗಿ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ಕ್ಷೇತ್ರದ ಜನರ ಹಿತರಕ್ಷಣೆಗಾಗಿ ಸಂಸದ ಶಿವಕುಮಾರ ಉದಾಸಿ ಅವರು ನಮ್ಮೊಂದಿಗೆ ಇರುತ್ತಾರೆ ಎಂದರು.</p>.<p>ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ ಮಾತನಾಡಿ, ಈ ಅವಧಿಯಲ್ಲಿ ಒಬ್ಬ ಶಾಸಕನಾಗಿ ಸಿ.ಎಂ.ಉದಾಸಿ ಕ್ಷೇತ್ರದ ಅಭಿವೃದ್ಧಿಗೆ ಬಹಳಷ್ಟು ಅನುದಾನ ತಂದಿದ್ದಾರೆ. ಬೆಳೆವಿಮೆ ಪರಿಹಾರ ಪಡೆಯುವಲ್ಲಿ ದೇಶದಲ್ಲಿ ಹಾನಗಲ್ ತಾಲ್ಲೂಕು ಹೆಸರಾಗಿದೆ. ಇದಕ್ಕೆ ಸಿ.ಎಂ.ಉದಾಸಿ ಕಾರಣ ಎಂದರು.</p>.<p>ಸುರಪೂರ ಶಾಸಕ ರಾಜು ಗೌಡ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ರಾಜ್ಯದ ಮುಖ್ಯಮಂತ್ರಿ ಈ ಜಿಲ್ಲೆಯವರು. ಇದೇ ತಾಲ್ಲೂಕಿನ ಅಳಿಯ ಅವರು. ಅಲ್ಲದೆ, ರಾಜ್ಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಸಿ.ಎಂ.ಉದಾಸಿ ಪ್ರತಿನಿಧಿಸುವ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬೇಕು ಎಂದು ಮನವಿ ಮಾಡಿದರು.</p>.<p>ಬ್ಯಾಡಗಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ನಿಂಗಪ್ಪ ಗೊಬ್ಬೇರ, ಮುಖಂಡರಾದ ಕಲ್ಯಾಣಕುಮಾರ ಶೆಟ್ಟರ, ಭೋಜರಾಜ ಕರೂದಿ, ಪದ್ಮನಾಭ ಕುಂದಾಪೂರ, ರವಿ ಪಾಟೀಲ, ಶಿವಾಜಿ ಸಾಳುಂಕೆ, ಶಿವಲಿಂಗಪ್ಪ ತಲ್ಲೂರ, ಡಾ.ಸುನಿಲ ಹಿರೇಮಠ, ರಾಜು ಹೊಸಕೇರಿ ತಿಮ್ಮಾಪೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>