ಭಾರತ ರತ್ನ ಕೊಟ್ಟಿರಲಿಲ್ಲ: ‘ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ 90ರ ದಶಕದವರೆಗೂ ಭಾರತ ರತ್ನ ಕೊಟ್ಟಿರಲಿಲ್ಲ. ಇಂದಿರಾಗಾಂಧಿ, ರಾಜೀವ್ ಗಾಂಧಿಗೆ ಭಾರತ ರತ್ನ ಕೊಟ್ಟದ್ದರು. ವಿ.ಪಿ. ಸಿಂಗ್ ಸರ್ಕಾರ ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಟ್ಟಿತು. ಅಂಬೇಡ್ಕರ್ ಅವರ ಚುನಾವಣೆಗೆ ಬೆಂಬಲ ಕೊಟ್ಟಿದ್ದು, ಅಂದಿನ ಜನಸಂಘ, ಇವರು ಈಗ ಮೀಸಲಾತಿ ರದ್ದಾಗುತ್ತದೆ ಎಂದು ಹೇಳುತ್ತಾರೆ. ಐವತ್ತು ವರ್ಷ ಪರಿಶಿಷ್ಟ ಸಮುದಾಯದವರ ಅಭಿವೃದ್ಧಿ ಮಾಡಬಹುದಿತ್ತು. ನಿಮ್ಮ ಮತಗಳು ಕೈ ತಪ್ಪುತ್ತವೆ ಎನ್ನುವ ಕಾರಣಕ್ಕೆ ಮೀಸಲಾತಿ ರದ್ದಾಗುತ್ತದೆ ಎಂಬ ಆರೋಪ ಮಾಡುತ್ತಾರೆ’ ಎಂದರು.