ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಂತ ಬಿಸ್ವಾ ಶರ್ಮಾ ರಾಜೀನಾಮೆಗೆ ಆಗ್ರಹ

ಹಾವೇರಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ
Last Updated 14 ಫೆಬ್ರುವರಿ 2022, 15:50 IST
ಅಕ್ಷರ ಗಾತ್ರ

ಹಾವೇರಿ: ಕಾಂಗ್ರೆಸ್‌ ನಾಯಕರಾಹುಲ್ ಗಾಂಧೀ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ರಾಜೀನಾಮಗೆ ಒತ್ತಾಯಿಸಿಹಾವೇರಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹಿರೇಮಠ ಮಾತನಾಡಿ, ‘ರಾಹುಲ್‌ ಗಾಂಧಿ ಅವರ ಹುಟ್ಟಿನ ಬಗ್ಗೆ ದಾಖಲೆ ಕೇಳುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಕೂಡ ತಮ್ಮ ಹುಟ್ಟಿನ ದಾಖಲೆಗಳನ್ನು ನೀಡಲಿ. ಈ ದೇಶದ ಜನರಿಗೆ ಸಂಸ್ಕೃತಿ, ಸಂಸ್ಕಾರದ ಪಾಠ ಹೇಳುವ ನರೇಂದ್ರ ಮೋದಿ ಅವರಿಗೆ ಸಂಸ್ಕಾರ ಇದ್ದರೆ ಕೂಡಲೇ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭರತ ರೆಡ್ಡಿ, ವೈ.ವಿ. ನಿಂಬಣ್ಣನವರ, ನವೀದ ವರ್ದಿ,ಶಹಾಬಾಜ್ ಖಾನ್ ಕುಲಕರ್ಣಿ, ಹಬೀಬುಲ್ಲಾ ಮುಲ್ಲಾ, ವೀರಾಜ್ ಕುಲಕರ್ಣಿ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಉಮರ್‌ ಇನಾಮದಾರ, ವಿಶ್ವನಾಥ ಕರೇಗೌಡ್ರ, ಯುವ ಕಾಂಗ್ರೆಸ್ ಮುಖಂಡರಾದ ರಾಜು ಶಿವಣ್ಣನವರ, ಉಮೀದ್ ನದಾಫ್, ಬಸವರಾಜ ಬಳ್ಳಾರಿ, ಸಿ.ಎಸ್. ಲಕ್ಷ್ಮೇಶ್ವರಮಠ, ನಿಂಗನಗೌಡ ಗೌಡಗೇರಿ, ಬಸವರಾಜ ಮಾಳಗಿ, ಮಹಾಲಿಂಗಯ್ಯ ಹಿರೇಮಠ ಮುಂತಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT