ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಘಟನೆಯಿಂದ ಪಕ್ಷದ ಬಲವರ್ಧನೆ

ಪುರಸಭೆ ಚುನಾವಣೆ: ಕಾಂಗ್ರೆಸ್ ಸಭೆ
Last Updated 4 ಡಿಸೆಂಬರ್ 2021, 2:19 IST
ಅಕ್ಷರ ಗಾತ್ರ

ಶಿಗ್ಗಾವಿ: ಪಕ್ಷದ ಬಲವರ್ಧನೆಗಾಗಿ ಸಂಘಟನೆ ಮುಖ್ಯವಾಗಿದ್ದು, ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲಿಸುವ ಜತೆಗೆ ಪಕ್ಷಕ್ಕೆ ಶಕ್ತಿ ನೀಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ ಹೇಳಿದರು.

ತಾಲ್ಲೂಕಿನ ಬಂಕಾಪುರ ಪಟ್ಟಣದ ವಿಠ್ಠಲ್ ರುಕ್ಮೀಣಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಪುರಸಭೆ ಚುನಾವಣೆ ಅಂಗವಾಗಿ ನಡೆದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷ ಆರಂಭದಿಂದ ತನ್ನದೆಯಾದ ತತ್ವಸಿದ್ಧಾಂತಗಳನ್ನು ಒಳಗೊಂಡಿದ್ದು, ಅವುಗಳ ಅಡಿಯಲ್ಲಿ ಪ್ರತಿಯೊಬ್ಬರು ಹೋಗಬೇಕು. ಸಣ್ಣ ಪುಟ್ಟ ಬಿನ್ನಾಭಿಪ್ರಾಯಗಳನ್ನು ಬಿಟ್ಟು ಪುರಸಭೆ ಚುನಾವಣೆಯಲ್ಲಿ ಯಾರಿಗೆ ಪಕ್ಷದ ವರಿಷ್ಠರು ಟಿಕೆಟ್ ನೀಡತ್ತಾರೋ, ಅಂತಹ ವ್ಯಕ್ತಿಯನ್ನು ಬೆಂಬಲಿಸಬೇಕು. ಪಕ್ಷ ತೆಗೆದುಕೊಂಡ ತೀರ್ಮಾನಕ್ಕೆ ಪ್ರತಿಯೊಬ್ಬರು ಬದ್ಧರಾಗಿ ಕೆಲ ಮಾಡಿದಾಗ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಸಲು ಸಾಧ್ಯವಿದೆ. ಅದಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರ ಪಡೆ ಗಟ್ಟಿಯಾಗಬೇಕು. ಪಕ್ಷದ ಸೇವೆಗಾಗಿ ನಾವು ಮುಂದಾಗಬೇಕು ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಂ.ಹಿರೇಮಠ, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎನ್.ವೆಂಕೋಜಿ ಅಧ್ಯಕ್ಷೆ ವಹಿಸಿದ್ದರು. ಹಾವೇರಿ ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಸವಣೂರ ತಾಲ್ಲೂಕು ಅಧ್ಯಕ್ಷ ನಾಗಪ್ಪ ತಿಪ್ಪಕ್ಕನವರ, ಮುಖಂಡರಾದ ಶಿವಾನಂದ ಬಾಗೂರ, ಹನುಮರಡ್ಡಿ ನಡುವಿನಮನಿ, ಮಂಜುನಾಥ ತಿಮ್ಮಾಪುರ, ರಾಜು ಕಮ್ಮಾರ, ಚನ್ನುಕುಮಾರ ದೇಸಾಯಿ, ಸತೀಶ ಆಲದಕಟ್ಟಿ, ಎಸ್.ಎಫ್.ಮಣಕಟ್ಟಿ, ಗುರನಗೌಡ ಪಾಟೀಲ, ಎ.ಎ.ಜಮಾದಾರ, ಮಲ್ಲೇಶಪ್ಪ ಬಡ್ಡಿ ಸೇರಿದಂತೆ ಪುರಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT