<p><strong>ಹಾವೇರಿ:</strong> ‘ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸಿಕೊಂಡಿರುವ ಕೇಂದ್ರ ಸರ್ಕಾರ, ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧದ ಷಡ್ಯಂತ್ರ ರೂಪಿಸಿದೆ’ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿರುವ ಬಿಜೆಪಿ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಲು ಯತ್ನಿಸಿದರು.</p>.<p>ನಗರದ ಕಾಗಿನೆಲೆ ರಸ್ತೆಯಲ್ಲಿರುವ ಮುರುಘಾಮಠದ ಬಳಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ಧ ಘೋಷಣೆ ಕೂಗಿದರು.</p>.<p>ಕಾಗಿನೆಲೆ ರಸ್ತೆಯ ಮೂಲಕ ಬಿಜೆಪಿ ಜಿಲ್ಲಾ ಕಚೇರಿಯವರೆಗೂ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಪ್ರವೇಶ ದ್ವಾರವನ್ನು ತಳ್ಳಿ ಒಳಗೆ ನುಗ್ಗಲು ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು, ಕಾರ್ಯಕರ್ತರನ್ನು ತಡೆದು ನಿಲ್ಲಿಸಿದರು. ಈ ಸಂದರ್ಭದಲ್ಲಿ ಪರಸ್ಪರ ತಳ್ಳಾಟ, ನೂಕಾಟ ನಡೆಯಿತು.</p>.<p>ಕೆಲವರು ಪ್ರವೇಶ ದ್ವಾರ ಗೇಟ್ ಏರಿ ಒಳಗೆ ನುಗ್ಗಲು ಯತ್ನಿಸಿದರು. ಅವರನ್ನು ಪೊಲೀಸರು ಕೆಳಗೆ ಇಳಿಸಿ, ವಶಕ್ಕೆ ಪಡೆದು ಕರೆದೊಯ್ದರು.</p>.<p>‘ರಾಜಕೀಯವಾಗಿ ಜನತೆಯ ವಿಶ್ವಾಸ ಗಳಿಸಬೇಕಾದ ಬಿಜೆಪಿಯವರು, ಕುತಂತ್ರದಿಂದ ಕಾಂಗ್ರೆಸ್ ವರಿಷ್ಠರನ್ನು ಕಟ್ಟಿಹಾಕಲು ಹೊರಟಿದ್ದಾರೆ. ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧದ ಷಡ್ಯಂತ್ರ ಮಾಡಿ, ಅವರ ಹೆಸರಿಗೆ ಚ್ಯುತಿ ತರುತ್ತಿದ್ದಾರೆ. ಕೇಂದ್ರ ಸರ್ಕಾರದ ಈ ಎಲ್ಲ ತಂತ್ರಗಳಿಗೆ ಕಾಂಗ್ರೆಸ್ ಜಗ್ಗುವುದಿಲ್ಲ. ಇದಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಪ್ರತಿಭಟನಕಾರರು ಹೇಳಿದರು.</p>.<p>‘ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ನೀಡಲು ಕಾಂಗ್ರೆಸ್ ಜಾರಿಗೆ ತಂದಿದ್ದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯ ಹೆಸರು ಮತ್ತು ಸ್ವರೂಪವನ್ನು ಕೇಂದ್ರ ಸರ್ಕಾರ ಬದಲಿಸುತ್ತಿದೆ. ಇದು ಗ್ರಾಮೀಣ ಜನರಿಗೆ ಮಾಡುವ ಮೋಸವಾಗಿದೆ’ ಎಂದು ಎಚ್ಚರಿಕೆ ನೀಡಿದರು.</p>.<p>‘ನರೇಗಾ ಯೋಜನೆಯ ಹೆಸರು ಮತ್ತು ಸ್ವರೂಪ ಬದಲಾವಣೆ ಮಾಡುವುದನ್ನು ಕೇಂದ್ರ ಸರ್ಕಾರ ಕೈಬಿಡಬೇಕು. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿರುದ್ಧ ದಾಖಲಿಸಿರುವ ಪ್ರಕರಣ ದುರುದ್ದೇಶಪೂರಿತವಾಗಿದ್ದು, ಅದನ್ನು ರದ್ದುಪಡಿಸಬೇಕು’ ಎಂದು ಆಗ್ರಹಿಸಿದರು.</p>.<p>ವಿಧಾನಸಭೆಯ ಉಪ ಸಭಾಪತಿಯೂ ಆಗಿರುವ ಶಾಸಕ ರುದ್ರಪ್ಪ ಲಮಾಣಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಮುಖಂಡರಾದ ಪ್ರೇಮಾ ಪಾಟೀಲ, ರಾಘವೇಂದ್ರ ಬಾಸೂರು, ಶಂಕರ ಮೆಹರವಾಡೆ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸಿಕೊಂಡಿರುವ ಕೇಂದ್ರ ಸರ್ಕಾರ, ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧದ ಷಡ್ಯಂತ್ರ ರೂಪಿಸಿದೆ’ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿರುವ ಬಿಜೆಪಿ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಲು ಯತ್ನಿಸಿದರು.</p>.<p>ನಗರದ ಕಾಗಿನೆಲೆ ರಸ್ತೆಯಲ್ಲಿರುವ ಮುರುಘಾಮಠದ ಬಳಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ಧ ಘೋಷಣೆ ಕೂಗಿದರು.</p>.<p>ಕಾಗಿನೆಲೆ ರಸ್ತೆಯ ಮೂಲಕ ಬಿಜೆಪಿ ಜಿಲ್ಲಾ ಕಚೇರಿಯವರೆಗೂ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಪ್ರವೇಶ ದ್ವಾರವನ್ನು ತಳ್ಳಿ ಒಳಗೆ ನುಗ್ಗಲು ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು, ಕಾರ್ಯಕರ್ತರನ್ನು ತಡೆದು ನಿಲ್ಲಿಸಿದರು. ಈ ಸಂದರ್ಭದಲ್ಲಿ ಪರಸ್ಪರ ತಳ್ಳಾಟ, ನೂಕಾಟ ನಡೆಯಿತು.</p>.<p>ಕೆಲವರು ಪ್ರವೇಶ ದ್ವಾರ ಗೇಟ್ ಏರಿ ಒಳಗೆ ನುಗ್ಗಲು ಯತ್ನಿಸಿದರು. ಅವರನ್ನು ಪೊಲೀಸರು ಕೆಳಗೆ ಇಳಿಸಿ, ವಶಕ್ಕೆ ಪಡೆದು ಕರೆದೊಯ್ದರು.</p>.<p>‘ರಾಜಕೀಯವಾಗಿ ಜನತೆಯ ವಿಶ್ವಾಸ ಗಳಿಸಬೇಕಾದ ಬಿಜೆಪಿಯವರು, ಕುತಂತ್ರದಿಂದ ಕಾಂಗ್ರೆಸ್ ವರಿಷ್ಠರನ್ನು ಕಟ್ಟಿಹಾಕಲು ಹೊರಟಿದ್ದಾರೆ. ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧದ ಷಡ್ಯಂತ್ರ ಮಾಡಿ, ಅವರ ಹೆಸರಿಗೆ ಚ್ಯುತಿ ತರುತ್ತಿದ್ದಾರೆ. ಕೇಂದ್ರ ಸರ್ಕಾರದ ಈ ಎಲ್ಲ ತಂತ್ರಗಳಿಗೆ ಕಾಂಗ್ರೆಸ್ ಜಗ್ಗುವುದಿಲ್ಲ. ಇದಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಪ್ರತಿಭಟನಕಾರರು ಹೇಳಿದರು.</p>.<p>‘ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ನೀಡಲು ಕಾಂಗ್ರೆಸ್ ಜಾರಿಗೆ ತಂದಿದ್ದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯ ಹೆಸರು ಮತ್ತು ಸ್ವರೂಪವನ್ನು ಕೇಂದ್ರ ಸರ್ಕಾರ ಬದಲಿಸುತ್ತಿದೆ. ಇದು ಗ್ರಾಮೀಣ ಜನರಿಗೆ ಮಾಡುವ ಮೋಸವಾಗಿದೆ’ ಎಂದು ಎಚ್ಚರಿಕೆ ನೀಡಿದರು.</p>.<p>‘ನರೇಗಾ ಯೋಜನೆಯ ಹೆಸರು ಮತ್ತು ಸ್ವರೂಪ ಬದಲಾವಣೆ ಮಾಡುವುದನ್ನು ಕೇಂದ್ರ ಸರ್ಕಾರ ಕೈಬಿಡಬೇಕು. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿರುದ್ಧ ದಾಖಲಿಸಿರುವ ಪ್ರಕರಣ ದುರುದ್ದೇಶಪೂರಿತವಾಗಿದ್ದು, ಅದನ್ನು ರದ್ದುಪಡಿಸಬೇಕು’ ಎಂದು ಆಗ್ರಹಿಸಿದರು.</p>.<p>ವಿಧಾನಸಭೆಯ ಉಪ ಸಭಾಪತಿಯೂ ಆಗಿರುವ ಶಾಸಕ ರುದ್ರಪ್ಪ ಲಮಾಣಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಮುಖಂಡರಾದ ಪ್ರೇಮಾ ಪಾಟೀಲ, ರಾಘವೇಂದ್ರ ಬಾಸೂರು, ಶಂಕರ ಮೆಹರವಾಡೆ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>