<p><strong>ಹಾವೇರಿ:</strong> ಕಾಂಗ್ರೆಸ್ ವರಿಷ್ಠ, ಸಂಸದ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯಯಾತ್ರೆಗೆ ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. </p>.<p>ಇಲ್ಲಿನ ಮೈಲಾರ ಮಹದೇವ ವೃತ್ತದಿಂದ ಮೆರವಣಿಗೆ ಆರಂಭಿಸಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸಮಾವೇಶಗೊಂಡು ಕೆಲಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆಯೊಡ್ಡಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಕಿಡಿಕಾರಿದರು.</p>.<p>ರಾಹುಲ್ಗಾಂಧಿಗೆ ಅಸ್ಸಾಂ ಪ್ರವೇಶ ನಿರಾಕರಿಸಿ ಹಲ್ಲೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆ ನೇತೃತ್ವ ವಹಿಸಿದ್ದ ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ‘ಬಿಜೆಪಿ ಅಧಿಕಾರಕ್ಕಾಗಿ ಭಾರತವನ್ನು ವಿಭಜನೆ ಮಾಡುತ್ತಿದೆ. ಆದರೆ, ರಾಹುಲ್ಗಾಂಧಿ ದೇಶವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಆಸ್ಸಾಂನಲ್ಲಿ ನಡೆದ ಘಟನೆಯಿಂದ ಬಿಜೆಪಿ ಸರ್ಕಾರಕ್ಕೆ ನಾಚಿಕೆಯಾಗಬೇಕು. ಬಿಜೆಪಿಗೆ ಭಯ ಶುರುವಾಗಿದೆ. ಆ ಕಾರಣಕ್ಕಾಗಿ ತೊಂದರೆ ಕೊಡುತ್ತಿದೆ’ ಎಂದು ಆರೋಪಿಸಿದರು.</p>.<p>ರಾಹುಲ್ಗಾಂಧಿ, ಕಾಂಗ್ರೆಸ್ ಯಾವುದಕ್ಕೂ ಹೆದರಲ್ಲ, ದೇಶದಲ್ಲಿ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬರುತ್ತದೆ ಎಂಬ ಭಯ ಬಿಜೆಪಿಗೆ ಇದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ ಬೆದರಿಸುವ ತಂತ್ರ ನಡೆಸಿದ್ದಾರೆ. ಪ್ರಧಾನಿ ಮೋದಿ ದೇಶದಲ್ಲಿ ಧಮನಕಾರಿ ಆಡಳಿತ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಸದಸ್ಯ ಲಿಂಗರಾಜ ಶಿವಣ್ಣನವರ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹಿರೇಮಠ, ಪ್ರಮುಖರಾದ ಈರಪ್ಪ ಲಮಾಣಿ, ಸೋಮಣ್ಣ ಬೇವಿನಮರದ, ಜಮೀರ್ ಜಿಗರಿ, ಎಂ.ಎಂ. ಮೈದೂರು, ಬಸವರಾಜ ಬಳ್ಳಾರಿ ಇತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಕಾಂಗ್ರೆಸ್ ವರಿಷ್ಠ, ಸಂಸದ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯಯಾತ್ರೆಗೆ ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. </p>.<p>ಇಲ್ಲಿನ ಮೈಲಾರ ಮಹದೇವ ವೃತ್ತದಿಂದ ಮೆರವಣಿಗೆ ಆರಂಭಿಸಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸಮಾವೇಶಗೊಂಡು ಕೆಲಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆಯೊಡ್ಡಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಕಿಡಿಕಾರಿದರು.</p>.<p>ರಾಹುಲ್ಗಾಂಧಿಗೆ ಅಸ್ಸಾಂ ಪ್ರವೇಶ ನಿರಾಕರಿಸಿ ಹಲ್ಲೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆ ನೇತೃತ್ವ ವಹಿಸಿದ್ದ ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ‘ಬಿಜೆಪಿ ಅಧಿಕಾರಕ್ಕಾಗಿ ಭಾರತವನ್ನು ವಿಭಜನೆ ಮಾಡುತ್ತಿದೆ. ಆದರೆ, ರಾಹುಲ್ಗಾಂಧಿ ದೇಶವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಆಸ್ಸಾಂನಲ್ಲಿ ನಡೆದ ಘಟನೆಯಿಂದ ಬಿಜೆಪಿ ಸರ್ಕಾರಕ್ಕೆ ನಾಚಿಕೆಯಾಗಬೇಕು. ಬಿಜೆಪಿಗೆ ಭಯ ಶುರುವಾಗಿದೆ. ಆ ಕಾರಣಕ್ಕಾಗಿ ತೊಂದರೆ ಕೊಡುತ್ತಿದೆ’ ಎಂದು ಆರೋಪಿಸಿದರು.</p>.<p>ರಾಹುಲ್ಗಾಂಧಿ, ಕಾಂಗ್ರೆಸ್ ಯಾವುದಕ್ಕೂ ಹೆದರಲ್ಲ, ದೇಶದಲ್ಲಿ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬರುತ್ತದೆ ಎಂಬ ಭಯ ಬಿಜೆಪಿಗೆ ಇದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ ಬೆದರಿಸುವ ತಂತ್ರ ನಡೆಸಿದ್ದಾರೆ. ಪ್ರಧಾನಿ ಮೋದಿ ದೇಶದಲ್ಲಿ ಧಮನಕಾರಿ ಆಡಳಿತ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಸದಸ್ಯ ಲಿಂಗರಾಜ ಶಿವಣ್ಣನವರ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹಿರೇಮಠ, ಪ್ರಮುಖರಾದ ಈರಪ್ಪ ಲಮಾಣಿ, ಸೋಮಣ್ಣ ಬೇವಿನಮರದ, ಜಮೀರ್ ಜಿಗರಿ, ಎಂ.ಎಂ. ಮೈದೂರು, ಬಸವರಾಜ ಬಳ್ಳಾರಿ ಇತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>