<p><strong>ಹಾನಗಲ್:</strong> ವಸತಿ ಯೋಜನೆಗಳ ಫಲಾನುಭವಿಗಳಿಗೆ ನೀಡುವ ಸಹಾಯಧನ ಕೇಂದ್ರ ಸರ್ಕಾರದ ಪಾಲು 8 ವರ್ಷಗಳಿಂದ ಬಂದಿಲ್ಲ. 15ನೇ ಹಣಕಾಸು ಆಯೋಗದ ಅನುದಾನವೂ ಬಿಡುಗಡೆಯಾಗಿಲ್ಲ. ಯುಜಿಡಿ, ಕುಡಿಯುವ ನೀರು, ಚರಂಡಿ ಇನ್ನಿತರ ಕಾಮಗಾರಿಗಳಿಗೆ ನೀಡುತ್ತಿದ್ದ ಶೇ 80ರಷ್ಟು ಅನುದಾನವನ್ನೂ ಕೇಂದ್ರ ಸರ್ಕಾರ ನೀಡುತ್ತಿಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ಆರೋಪಿಸಿದರು.</p>.<p>ಇಲ್ಲಿನ ತಮ್ಮ ಜನಸಂಪರ್ಕ ಕಚೇರಿಯಲ್ಲಿ ಶುಕ್ರವಾರ ಹಾನಗಲ್ ಪಟ್ಟಣ ವ್ಯಾಪ್ತಿಯ ಎಲ್ಲ ವಾರ್ಡ್ಗಳ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರೀತಿ, ವಿಶ್ವಾಸ, ಸಹೋದರತೆ, ಸೌಹಾರ್ದತೆ ನೆಲೆಯೂರಬೇಕಾದರೆ ಕಾಂಗ್ರೆಸ್ ಆಡಳಿತದಲ್ಲಿ ಇರಬೇಕು ಎಂದರು.</p>.<p>ಬಿಜೆಪಿ ತನ್ನ ಸಾಧನೆ, ಜನಪರ ಕೆಲಸ ಮುಂದಿಟ್ಟು ರಾಜಕಾರಣ ಮಾಡದೇ, ವಿರೋಧ ಪಕ್ಷಗಳನ್ನು ದುರ್ಬಲಗೊಳಿಸಿ, ಮತ ವಿಭಜನೆಯ ಷಡ್ಯಂತ್ರ ಹೂಡಿದ್ದು ಈ ಬಗ್ಗೆ ಜಾಗರೂಕತೆ ವಹಿಸುವಂತೆ ಸಲಹೆ ನೀಡಿದರು.</p>.<p>ಭಾರತದ ಸಂವಿಧಾನದ ಅಂಶಗಳನ್ನೆಲ್ಲ ಪಾಲಿಸುವ ಏಕೈಕ ಪಕ್ಷ ಕಾಂಗ್ರೆಸ್. ಪಡಿತರ ವ್ಯವಸ್ಥೆ, 18ನೇ ವಯಸ್ಸಿಗೆ ಮತದಾನ, ಕಂಪ್ಯೂಟರ್ ಕ್ರಾಂತಿ, ಮೀಸಲಾತಿ ಹೀಗೆ ಸಮಾಜಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ ಎಂದರು.</p>.<p>ದೇಶದ ಸಾಲ ಇದೀಗ ಬರೋಬ್ಬರಿ ₹215 ಲಕ್ಷ ಕೋಟಿಯಷ್ಟಾಗಿದೆ. ಪ್ರತಿಯೊಬ್ಬರ ತಲೆ ಮೇಲೆ ಸಾಲದ ಹೊರೆ ಹೆಚ್ಚುತ್ತಲೇ ಇದೆ. ಹೀಗಿದ್ದರೂ ಬಿಜೆಪಿ ಮುಖಂಡರು ಮಾತ್ರ ಬಣ್ಣದ ಮಾತುಗಳು, ಹಸಿ ಸುಳ್ಳುಗಳ ಮೂಲಕ ಭಾವನಾತ್ಮಕ ಸಂಗತಿ ಮುಂದಿಟ್ಟು ಮೋಸ ಮಾಡುತ್ತಿದ್ದಾರೆ. ಇದರ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು.</p>.<p>ನಗರ ಘಟಕದ ಅಧ್ಯಕ್ಷ ಮತೀನ್ ಶಿರಬಡಗಿ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಸಮಸ್ಯೆಗಳಿವೆ. ಶಾಸಕ ಶ್ರೀನಿವಾಸ ಮಾನೆ ಅವರ ಕಾಳಜಿಯಿಂದ ಸಮಸ್ಯೆಗಳು ಒಂದೊಂದಾಗಿ ಪರಿಹಾರ ಕಾಣುತ್ತಿವೆ ಎಂದರು.</p>.<p>ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ್ ಜಮಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಪುರಸಭೆ ಮಾಜಿ ಅಧ್ಯಕ್ಷರಾದ ಪರಶುರಾಮ ಖಂಡೂನವರ, ಮಮತಾ ಆರೆಗೊಪ್ಪ, ಖುರ್ಷಿದ್ಅಹ್ಮದ್ ಹುಲ್ಲತ್ತಿ, ಮಾಜಿ ಉಪಾಧ್ಯಕ್ಷೆ ಶಂಶಿಯಾ ಬಾಳೂರ, ಮುಖಂಡರಾದ ದುದ್ದುಸಾಬ ಅಕ್ಕಿವಳ್ಳಿ, ಸಿಕಂದರ್ ವಾಲಿಕಾರ, ರವಿ ದೇಶಪಾಂಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್:</strong> ವಸತಿ ಯೋಜನೆಗಳ ಫಲಾನುಭವಿಗಳಿಗೆ ನೀಡುವ ಸಹಾಯಧನ ಕೇಂದ್ರ ಸರ್ಕಾರದ ಪಾಲು 8 ವರ್ಷಗಳಿಂದ ಬಂದಿಲ್ಲ. 15ನೇ ಹಣಕಾಸು ಆಯೋಗದ ಅನುದಾನವೂ ಬಿಡುಗಡೆಯಾಗಿಲ್ಲ. ಯುಜಿಡಿ, ಕುಡಿಯುವ ನೀರು, ಚರಂಡಿ ಇನ್ನಿತರ ಕಾಮಗಾರಿಗಳಿಗೆ ನೀಡುತ್ತಿದ್ದ ಶೇ 80ರಷ್ಟು ಅನುದಾನವನ್ನೂ ಕೇಂದ್ರ ಸರ್ಕಾರ ನೀಡುತ್ತಿಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ಆರೋಪಿಸಿದರು.</p>.<p>ಇಲ್ಲಿನ ತಮ್ಮ ಜನಸಂಪರ್ಕ ಕಚೇರಿಯಲ್ಲಿ ಶುಕ್ರವಾರ ಹಾನಗಲ್ ಪಟ್ಟಣ ವ್ಯಾಪ್ತಿಯ ಎಲ್ಲ ವಾರ್ಡ್ಗಳ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರೀತಿ, ವಿಶ್ವಾಸ, ಸಹೋದರತೆ, ಸೌಹಾರ್ದತೆ ನೆಲೆಯೂರಬೇಕಾದರೆ ಕಾಂಗ್ರೆಸ್ ಆಡಳಿತದಲ್ಲಿ ಇರಬೇಕು ಎಂದರು.</p>.<p>ಬಿಜೆಪಿ ತನ್ನ ಸಾಧನೆ, ಜನಪರ ಕೆಲಸ ಮುಂದಿಟ್ಟು ರಾಜಕಾರಣ ಮಾಡದೇ, ವಿರೋಧ ಪಕ್ಷಗಳನ್ನು ದುರ್ಬಲಗೊಳಿಸಿ, ಮತ ವಿಭಜನೆಯ ಷಡ್ಯಂತ್ರ ಹೂಡಿದ್ದು ಈ ಬಗ್ಗೆ ಜಾಗರೂಕತೆ ವಹಿಸುವಂತೆ ಸಲಹೆ ನೀಡಿದರು.</p>.<p>ಭಾರತದ ಸಂವಿಧಾನದ ಅಂಶಗಳನ್ನೆಲ್ಲ ಪಾಲಿಸುವ ಏಕೈಕ ಪಕ್ಷ ಕಾಂಗ್ರೆಸ್. ಪಡಿತರ ವ್ಯವಸ್ಥೆ, 18ನೇ ವಯಸ್ಸಿಗೆ ಮತದಾನ, ಕಂಪ್ಯೂಟರ್ ಕ್ರಾಂತಿ, ಮೀಸಲಾತಿ ಹೀಗೆ ಸಮಾಜಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ ಎಂದರು.</p>.<p>ದೇಶದ ಸಾಲ ಇದೀಗ ಬರೋಬ್ಬರಿ ₹215 ಲಕ್ಷ ಕೋಟಿಯಷ್ಟಾಗಿದೆ. ಪ್ರತಿಯೊಬ್ಬರ ತಲೆ ಮೇಲೆ ಸಾಲದ ಹೊರೆ ಹೆಚ್ಚುತ್ತಲೇ ಇದೆ. ಹೀಗಿದ್ದರೂ ಬಿಜೆಪಿ ಮುಖಂಡರು ಮಾತ್ರ ಬಣ್ಣದ ಮಾತುಗಳು, ಹಸಿ ಸುಳ್ಳುಗಳ ಮೂಲಕ ಭಾವನಾತ್ಮಕ ಸಂಗತಿ ಮುಂದಿಟ್ಟು ಮೋಸ ಮಾಡುತ್ತಿದ್ದಾರೆ. ಇದರ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು.</p>.<p>ನಗರ ಘಟಕದ ಅಧ್ಯಕ್ಷ ಮತೀನ್ ಶಿರಬಡಗಿ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಸಮಸ್ಯೆಗಳಿವೆ. ಶಾಸಕ ಶ್ರೀನಿವಾಸ ಮಾನೆ ಅವರ ಕಾಳಜಿಯಿಂದ ಸಮಸ್ಯೆಗಳು ಒಂದೊಂದಾಗಿ ಪರಿಹಾರ ಕಾಣುತ್ತಿವೆ ಎಂದರು.</p>.<p>ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ್ ಜಮಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಪುರಸಭೆ ಮಾಜಿ ಅಧ್ಯಕ್ಷರಾದ ಪರಶುರಾಮ ಖಂಡೂನವರ, ಮಮತಾ ಆರೆಗೊಪ್ಪ, ಖುರ್ಷಿದ್ಅಹ್ಮದ್ ಹುಲ್ಲತ್ತಿ, ಮಾಜಿ ಉಪಾಧ್ಯಕ್ಷೆ ಶಂಶಿಯಾ ಬಾಳೂರ, ಮುಖಂಡರಾದ ದುದ್ದುಸಾಬ ಅಕ್ಕಿವಳ್ಳಿ, ಸಿಕಂದರ್ ವಾಲಿಕಾರ, ರವಿ ದೇಶಪಾಂಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>