<p><strong>ಹಾವೇರಿ</strong>: ‘ರೈತಪರ ಮಸೂದೆಗಳ ವಿರುದ್ಧ ರೈತರನ್ನು ಎತ್ತಿಕಟ್ಟುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಹೀನ ರಾಜಕಾರಣ ಮಾಡುತ್ತಾ, ದಲ್ಲಾಳಿಗಳ ಪರವಾಗಿ ಬ್ಯಾಟಿಂಗ್ ಮಾಡುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.</p>.<p>ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ಈ ಕಾಯ್ದೆಗಳ ಜಾರಿ ಬಗ್ಗೆ ಕಾಂಗ್ರೆಸ್ ಲೋಕಸಭಾ ಚುನಾವಣೆ ವೇಳೆ ಹೇಳಿತ್ತು. ಈಗ ಬಿಜೆಪಿಗೆ ಲಾಭವಾಗುತ್ತದೆ ಎಂದು ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ನಿನ್ನೆಯ ಕರ್ನಾಟಕ ಬಂದ್ ವಿಫಲವಾಗಿದೆ. ರಾಜ್ಯದ ಜನರು ಸರ್ಕಾರದ ಪರ ಇದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಇರದಿದ್ದಾಗ ಬೆಂಕಿ ಹಚ್ಚೋ ಕೆಲಸ ಮಾಡುತ್ತದೆ.ಹಿಂದೆಯೂ ಮಾಡಿದೆ, ಈಗಲೂ ಮಾಡುತ್ತಿದೆ ಎಂದು ಟೀಕಿಸಿದರು.</p>.<p>ಸಿ.ಎಂ ಬದಲಾವಣೆ ಇಲ್ಲವೇ ಇಲ್ಲ. ಈ ಬಗ್ಗೆ ಎಲ್ಲಿಯೂ ಚರ್ಚೆಗಳು ನಡೆದಿಲ್ಲ. ಸುರೇಶ್ ಅಂಗಡಿ ನನಗೆ ಬಹಳ ಆತ್ಮೀಯರು. ಅವರು ಎಂದೂ ಮುಖ್ಯಮಂತ್ರಿ ವಿಚಾರದ ಬಗ್ಗೆ ಚರ್ಚಿಸಿರಲಿಲ್ಲ.ಮುಂದಿನ ಮೂರು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ರೈತಪರ ಮಸೂದೆಗಳ ವಿರುದ್ಧ ರೈತರನ್ನು ಎತ್ತಿಕಟ್ಟುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಹೀನ ರಾಜಕಾರಣ ಮಾಡುತ್ತಾ, ದಲ್ಲಾಳಿಗಳ ಪರವಾಗಿ ಬ್ಯಾಟಿಂಗ್ ಮಾಡುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.</p>.<p>ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ಈ ಕಾಯ್ದೆಗಳ ಜಾರಿ ಬಗ್ಗೆ ಕಾಂಗ್ರೆಸ್ ಲೋಕಸಭಾ ಚುನಾವಣೆ ವೇಳೆ ಹೇಳಿತ್ತು. ಈಗ ಬಿಜೆಪಿಗೆ ಲಾಭವಾಗುತ್ತದೆ ಎಂದು ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ನಿನ್ನೆಯ ಕರ್ನಾಟಕ ಬಂದ್ ವಿಫಲವಾಗಿದೆ. ರಾಜ್ಯದ ಜನರು ಸರ್ಕಾರದ ಪರ ಇದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಇರದಿದ್ದಾಗ ಬೆಂಕಿ ಹಚ್ಚೋ ಕೆಲಸ ಮಾಡುತ್ತದೆ.ಹಿಂದೆಯೂ ಮಾಡಿದೆ, ಈಗಲೂ ಮಾಡುತ್ತಿದೆ ಎಂದು ಟೀಕಿಸಿದರು.</p>.<p>ಸಿ.ಎಂ ಬದಲಾವಣೆ ಇಲ್ಲವೇ ಇಲ್ಲ. ಈ ಬಗ್ಗೆ ಎಲ್ಲಿಯೂ ಚರ್ಚೆಗಳು ನಡೆದಿಲ್ಲ. ಸುರೇಶ್ ಅಂಗಡಿ ನನಗೆ ಬಹಳ ಆತ್ಮೀಯರು. ಅವರು ಎಂದೂ ಮುಖ್ಯಮಂತ್ರಿ ವಿಚಾರದ ಬಗ್ಗೆ ಚರ್ಚಿಸಿರಲಿಲ್ಲ.ಮುಂದಿನ ಮೂರು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>