<p><strong>ಹಾವೇರಿ:</strong>ಲಾಕ್ಡೌನ್ ಸಂದರ್ಭದಲ್ಲಿ ‘ಸೇವಾ ಹೀ ಸಂಘಟನ್’ ಧ್ಯೇಯದಡಿ ವೃಕ್ಷಾರೋಪಣಾ, ಲಸಿಕಾ ಜಾಗೃತಿ ಅಭಿಯಾನ ಹಾಗೂ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸಲು ಸಹಕರಿಸಿದ ಎಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳಿಗೆ ಅಭಿನಂದನೆಗಳು ಸಲ್ಲುತ್ತೇವೆ ಎಂದು ಬಿಜೆಪಿ ಜಿಲ್ಲಾ ಘಟಕದಎಸ್.ಟಿ. ಮೋರ್ಚಾ ಅಧ್ಯಕ್ಷಶಿವಾನಂದ ಯಮನಕ್ಕನವರ ಹೇಳಿದರು.</p>.<p>ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಜಿಲ್ಲಾ ಎಸ್.ಟಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ಪಕ್ಷ ಸಂಘಟನೆಗೆ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗೂಡಿ ಶ್ರಮಿಸಬೇಕು ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಸಂಘಟನಾ ಪ್ರಭಾರಿಗಳಾದ ಎಲ್.ಎನ್. ಕಲ್ಲೇಶ ಅವರು ಡಾ.ಶ್ಯಾಮ ಪ್ರಸಾದ ಮುಖರ್ಜಿಯವರ ಹಾಗೂ ಪಂಡಿತ ದೀನದಯಾಳ ಉಪಾಧ್ಯಾಯರವರ ಬಲಿದಾನಗಳ ಕುರಿತು ಮಾತನಾಡಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ಎಸ್.ಟಿ ಮೋರ್ಚಾ ಹಲವಾರು ಚಟುವಟಿಕೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪುವ ರೀತಿಯಲ್ಲಿ ಮಾಡಿದ್ದು ಶ್ಲಾಘನೀಯ ಮತ್ತು ಎಸ್.ಟಿ ಸಮುದಾಯವನ್ನು ಜಾಗೃತಗೊಳಿಸಿ ಕೋವಿಡ್ ಲಸಿಕೀಕರಣಕ್ಕೆ ಪ್ರೇರೇಪಿಸಿ ಎಂದು ಸಲಹೆ ನೀಡಿದರು.</p>.<p>ಎಸ್.ಟಿ. ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಮಂಜುನಾಥ ಕರೂರ ಅವರಿಗೆ ಮೌನಾಚರಣೆ ಮೂಲಕ ಗೌರವ ಸಮರ್ಪಿಸಲಾಯಿತು.</p>.<p>ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ ಮುಳ್ಳೂರ, ಶಶಿಧರ ಹೊಸಳ್ಳಿ, ಜಿಲ್ಲಾ ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಬಸೆನಾಯ್ಕರ ಮತ್ತು ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong>ಲಾಕ್ಡೌನ್ ಸಂದರ್ಭದಲ್ಲಿ ‘ಸೇವಾ ಹೀ ಸಂಘಟನ್’ ಧ್ಯೇಯದಡಿ ವೃಕ್ಷಾರೋಪಣಾ, ಲಸಿಕಾ ಜಾಗೃತಿ ಅಭಿಯಾನ ಹಾಗೂ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸಲು ಸಹಕರಿಸಿದ ಎಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳಿಗೆ ಅಭಿನಂದನೆಗಳು ಸಲ್ಲುತ್ತೇವೆ ಎಂದು ಬಿಜೆಪಿ ಜಿಲ್ಲಾ ಘಟಕದಎಸ್.ಟಿ. ಮೋರ್ಚಾ ಅಧ್ಯಕ್ಷಶಿವಾನಂದ ಯಮನಕ್ಕನವರ ಹೇಳಿದರು.</p>.<p>ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಜಿಲ್ಲಾ ಎಸ್.ಟಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ಪಕ್ಷ ಸಂಘಟನೆಗೆ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗೂಡಿ ಶ್ರಮಿಸಬೇಕು ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಸಂಘಟನಾ ಪ್ರಭಾರಿಗಳಾದ ಎಲ್.ಎನ್. ಕಲ್ಲೇಶ ಅವರು ಡಾ.ಶ್ಯಾಮ ಪ್ರಸಾದ ಮುಖರ್ಜಿಯವರ ಹಾಗೂ ಪಂಡಿತ ದೀನದಯಾಳ ಉಪಾಧ್ಯಾಯರವರ ಬಲಿದಾನಗಳ ಕುರಿತು ಮಾತನಾಡಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ಎಸ್.ಟಿ ಮೋರ್ಚಾ ಹಲವಾರು ಚಟುವಟಿಕೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪುವ ರೀತಿಯಲ್ಲಿ ಮಾಡಿದ್ದು ಶ್ಲಾಘನೀಯ ಮತ್ತು ಎಸ್.ಟಿ ಸಮುದಾಯವನ್ನು ಜಾಗೃತಗೊಳಿಸಿ ಕೋವಿಡ್ ಲಸಿಕೀಕರಣಕ್ಕೆ ಪ್ರೇರೇಪಿಸಿ ಎಂದು ಸಲಹೆ ನೀಡಿದರು.</p>.<p>ಎಸ್.ಟಿ. ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಮಂಜುನಾಥ ಕರೂರ ಅವರಿಗೆ ಮೌನಾಚರಣೆ ಮೂಲಕ ಗೌರವ ಸಮರ್ಪಿಸಲಾಯಿತು.</p>.<p>ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ ಮುಳ್ಳೂರ, ಶಶಿಧರ ಹೊಸಳ್ಳಿ, ಜಿಲ್ಲಾ ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಬಸೆನಾಯ್ಕರ ಮತ್ತು ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>