<p><strong>ಹಾವೇರಿ:</strong> ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದ್ದ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.</p>.ಶಿಗ್ಗಾವಿ: ಇಂದಿರಾ ಕ್ಯಾಂಟೀನ್ ಅಪೂರ್ಣ; 2 ವರ್ಷದಿಂದ ಕುಂಟುತ್ತಾ ಸಾಗಿದೆ ಕಾಮಗಾರಿ.<p>ಕೊಲರಯ ಪ್ರಮುಖ ಆರೋಪಿ ನಾಗರಾಜ ಸವದತ್ತಿ ಹಾಗೂ ಅಶ್ರಫ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಗಾಯಗೊಂಡಿರುವ ಅವರಿಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.</p><p>ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳು ಊರೂರು ಸುತ್ತಿದ್ದರು. ಹಾನಗಲ್ ತಾಲ್ಲೂಕಿನ ಚಿಕ್ಕಾಂಶಿಹೂಸೂರಿನಲ್ಲಿ ಆರೋಪಿಗಳು ಇರುವ ಮಾಹಿತಿ ಲಭ್ಯವಾಗಿತ್ತು. ಅದೇ ಮಾಹಿತಿ ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದರು. ಮಾರ್ಗಮಧ್ಯೆ ಪೊಲೀಸರ ಮೇಲೆಯೇ ಆರೋಪಿಗಳು ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದರು.</p>.ಹಾವೇರಿ | ‘ಕಾಂಗ್ರೆಸ್ ಮುಕ್ತ ಜಿಲ್ಲೆ’ಗಾಗಿ ಬಿಜೆಪಿ ಶಪಥ.<p>ಆರೋಪಿಗಳನ್ನು ಬೆನ್ನಟ್ಟಿದ್ದ ಪಿಎಸ್ಐಗಳಾದ ಸಂಪತ್ ಆನಿಕಿವಿ ಹಾಗೂ ಶರಣಪ್ಪ ಹಂಡ್ರಗಲ್ ಅವರು ಪಿಸ್ತೂಲ್ನಿಂದ ಗುಂಡು ಹೊಡೆದಿದ್ದಾರೆ.</p><p>'ಗುತ್ತಿಗೆದಾರ ಶಿವಾನಂದ ಹತ್ಯೆ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ. ಆತ್ಮರಕ್ಷಣೆಗೆಗಾಗಿ ಇಬ್ಬರ ಆರೋಪಿಗಳ ಕಾಲಿಗೆ ಗುಂಡು ಹೊಡೆಯಲಾಗಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p> .ಹಾವೇರಿ ಜಿಲ್ಲೆಯಲ್ಲಿ ಶೇ 74.43ರಷ್ಟು ಮುಂಗಾರು ಬಿತ್ತನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದ್ದ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.</p>.ಶಿಗ್ಗಾವಿ: ಇಂದಿರಾ ಕ್ಯಾಂಟೀನ್ ಅಪೂರ್ಣ; 2 ವರ್ಷದಿಂದ ಕುಂಟುತ್ತಾ ಸಾಗಿದೆ ಕಾಮಗಾರಿ.<p>ಕೊಲರಯ ಪ್ರಮುಖ ಆರೋಪಿ ನಾಗರಾಜ ಸವದತ್ತಿ ಹಾಗೂ ಅಶ್ರಫ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಗಾಯಗೊಂಡಿರುವ ಅವರಿಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.</p><p>ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳು ಊರೂರು ಸುತ್ತಿದ್ದರು. ಹಾನಗಲ್ ತಾಲ್ಲೂಕಿನ ಚಿಕ್ಕಾಂಶಿಹೂಸೂರಿನಲ್ಲಿ ಆರೋಪಿಗಳು ಇರುವ ಮಾಹಿತಿ ಲಭ್ಯವಾಗಿತ್ತು. ಅದೇ ಮಾಹಿತಿ ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದರು. ಮಾರ್ಗಮಧ್ಯೆ ಪೊಲೀಸರ ಮೇಲೆಯೇ ಆರೋಪಿಗಳು ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದರು.</p>.ಹಾವೇರಿ | ‘ಕಾಂಗ್ರೆಸ್ ಮುಕ್ತ ಜಿಲ್ಲೆ’ಗಾಗಿ ಬಿಜೆಪಿ ಶಪಥ.<p>ಆರೋಪಿಗಳನ್ನು ಬೆನ್ನಟ್ಟಿದ್ದ ಪಿಎಸ್ಐಗಳಾದ ಸಂಪತ್ ಆನಿಕಿವಿ ಹಾಗೂ ಶರಣಪ್ಪ ಹಂಡ್ರಗಲ್ ಅವರು ಪಿಸ್ತೂಲ್ನಿಂದ ಗುಂಡು ಹೊಡೆದಿದ್ದಾರೆ.</p><p>'ಗುತ್ತಿಗೆದಾರ ಶಿವಾನಂದ ಹತ್ಯೆ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ. ಆತ್ಮರಕ್ಷಣೆಗೆಗಾಗಿ ಇಬ್ಬರ ಆರೋಪಿಗಳ ಕಾಲಿಗೆ ಗುಂಡು ಹೊಡೆಯಲಾಗಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p> .ಹಾವೇರಿ ಜಿಲ್ಲೆಯಲ್ಲಿ ಶೇ 74.43ರಷ್ಟು ಮುಂಗಾರು ಬಿತ್ತನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>