<p>ಬ್ಯಾಡಗಿ: ‘ಮಾನವ ಕಳ್ಳಸಾಗಣೆಕೆ ತಡೆಗೆ ಎಲ್ಲಾ ಇಲಾಖೆಗಳ ಸಹಕಾರ ಅಗತ್ಯವಾಗಿದೆ’ ಎಂದು ಹಿರಿಯ ನ್ಯಾಯಾಧೀಶ ಅಮೋಲ್ ಹಿರಿಕುಡೆ ಹೇಳಿದರು.</p>.<p>ತಾಲ್ಲೂಕಿನ ಛತ್ರ ಗ್ರಾಮದ ನಿಂಗಮ್ಮ ಕಳಸೂರಮಠ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಆರಕ್ಷಕ ಇಲಾಖೆಗಳ ಸಹಯೋಗದಲ್ಲಿ ಈಚೆಗೆ ನಡೆದ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಅಂಗಾಂಗಗಳ ಮಾರಾಟ, ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿಗಳಿಗೆ ಮಾನವ ಕಳ್ಳಸಾಗಾಣಿಕೆ ನಡೆಯುತ್ತದೆ. ಜನರು ಜವಾಬ್ದಾರಿಯುತವಾಗಿ ತಡೆಗಟ್ಟಲು ಕೆಲಸ ಮಾಡಬೇಕಾಗಿದೆ’ ಎಂದರು.</p>.<p>ಕಿರಿಯ ನ್ಯಾಯಾಧೀಶ ಸುರೇಶ ವಗ್ಗನವರ ಮಾತನಾಡಿ, ‘ಹೆಂಗಸರು ಆಮಿಷಗಳಿಗೆ ಬಲಿಯಾಗಿ ಮೋಸ ಹೋಗುವುದನ್ನು ತಡೆಯಬೇಕು, ಮಕ್ಕಳಿಗೆ ಸರಿ, ತಪ್ಪುಗಳ ಮಾಹಿತಿ ನೀಡಬೇಕು’ ಎಂದರು.</p>.<p>ಪಿಎಸ್ಐ ಬಿ.ಎಸ್.ಅರವಿಂದ ಮಾತನಾಡಿ, ‘ಮಾನವ ಕಳ್ಳ ಸಾಗಾಣಿಕೆಯ ಕಾಯ್ದೆ ಕುರಿತು ಎಲ್ಲರಲ್ಲಿಯೂ ಅರಿವು ಮೂಡಿಸಬೇಕು. ಅವಿದ್ಯಾವಂತರು ಮೋಸ ಹೋಗುವ ಸಂಭವ ಹೆಚ್ಚಿದೆ. ಈ ಕುರಿತು ಅವರಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ಎಸ್.ಎನ್.ಬಾರ್ಕಿ, ಕಾರ್ಯದರ್ಶಿ ಎಂ.ಪಿ.ಹಂಜಿಗಿ, ಮುಖ್ಯಶಿಕ್ಷಕ ಬಿ.ರಾಜಶೇಖರಪ್ಪ, ಶಾಲಾ ಸಿಬ್ಬಂದಿ ಹಾಗೂ ಮಕ್ಕಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ಯಾಡಗಿ: ‘ಮಾನವ ಕಳ್ಳಸಾಗಣೆಕೆ ತಡೆಗೆ ಎಲ್ಲಾ ಇಲಾಖೆಗಳ ಸಹಕಾರ ಅಗತ್ಯವಾಗಿದೆ’ ಎಂದು ಹಿರಿಯ ನ್ಯಾಯಾಧೀಶ ಅಮೋಲ್ ಹಿರಿಕುಡೆ ಹೇಳಿದರು.</p>.<p>ತಾಲ್ಲೂಕಿನ ಛತ್ರ ಗ್ರಾಮದ ನಿಂಗಮ್ಮ ಕಳಸೂರಮಠ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಆರಕ್ಷಕ ಇಲಾಖೆಗಳ ಸಹಯೋಗದಲ್ಲಿ ಈಚೆಗೆ ನಡೆದ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಅಂಗಾಂಗಗಳ ಮಾರಾಟ, ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿಗಳಿಗೆ ಮಾನವ ಕಳ್ಳಸಾಗಾಣಿಕೆ ನಡೆಯುತ್ತದೆ. ಜನರು ಜವಾಬ್ದಾರಿಯುತವಾಗಿ ತಡೆಗಟ್ಟಲು ಕೆಲಸ ಮಾಡಬೇಕಾಗಿದೆ’ ಎಂದರು.</p>.<p>ಕಿರಿಯ ನ್ಯಾಯಾಧೀಶ ಸುರೇಶ ವಗ್ಗನವರ ಮಾತನಾಡಿ, ‘ಹೆಂಗಸರು ಆಮಿಷಗಳಿಗೆ ಬಲಿಯಾಗಿ ಮೋಸ ಹೋಗುವುದನ್ನು ತಡೆಯಬೇಕು, ಮಕ್ಕಳಿಗೆ ಸರಿ, ತಪ್ಪುಗಳ ಮಾಹಿತಿ ನೀಡಬೇಕು’ ಎಂದರು.</p>.<p>ಪಿಎಸ್ಐ ಬಿ.ಎಸ್.ಅರವಿಂದ ಮಾತನಾಡಿ, ‘ಮಾನವ ಕಳ್ಳ ಸಾಗಾಣಿಕೆಯ ಕಾಯ್ದೆ ಕುರಿತು ಎಲ್ಲರಲ್ಲಿಯೂ ಅರಿವು ಮೂಡಿಸಬೇಕು. ಅವಿದ್ಯಾವಂತರು ಮೋಸ ಹೋಗುವ ಸಂಭವ ಹೆಚ್ಚಿದೆ. ಈ ಕುರಿತು ಅವರಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ಎಸ್.ಎನ್.ಬಾರ್ಕಿ, ಕಾರ್ಯದರ್ಶಿ ಎಂ.ಪಿ.ಹಂಜಿಗಿ, ಮುಖ್ಯಶಿಕ್ಷಕ ಬಿ.ರಾಜಶೇಖರಪ್ಪ, ಶಾಲಾ ಸಿಬ್ಬಂದಿ ಹಾಗೂ ಮಕ್ಕಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>