<p><strong>ಹಾನಗಲ್: </strong>ಸಹಕಾರಿ ಕ್ಷೇತ್ರ ಬಲವಾಗಿ ಬೆಳೆಯುತ್ತಿದ್ದು, ಗ್ರಾಮೀಣ ಮಟ್ಟದಲ್ಲಿ ಹಲವಾರು ಸಾಮಾಜಿಕ ಸೇವೆಗಳ ಯೋಜನೆಗಳ ಅನುಷ್ಠಾನಕ್ಕಾಗಿ ಸಹಕಾರಿ ರಂಗದ ನೆರವು ಪಡೆಯುವ ಯೋಚನೆಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಜಿ.ನಂಜನಗೌಡ ಹೇಳಿದರು.</p>.<p>ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಛತ್ರಪತಿ ಶಿವಾಜಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಕಟ್ಟಡವನ್ನು ಸೋಮವಾರ ಉದ್ಘಾಟಿಸಿದ ಅವರು, ರಾಜ್ಯ ಸರ್ಕಾರ ಕೂಡ ರೈತರಿಗೆ ಅನುಕೂಲವಾಗುವ ಯೋಜನೆಗಳಿಗೆ ಸಹಕಾರಿ ಸಂಘಗಳ ಪ್ರಯೋಜನ ಪಡೆಯಲಿದೆ ಎಂದರು.</p>.<p>ವಯಕ್ತಿಕ ಲಾಭದ ಚಿಂತನೆಯುಳ್ಳವರು ಸ್ಥಾಪಿಸಿದ ಸಂಸ್ಥೆಗಳು ಅವನತಿಯಾಗಿವೆ. ಸಹಕಾರಿ ಕ್ಷೇತ್ರವು ಸಾಮಾಜಿಕ ಭದ್ಧತೆಯಾಗಿದ್ದು, ಸೇವಾ ಮನೋಭಾವದ ಜನರಿಂದ ಸಹಕಾರಿ ಕ್ಷೇತ್ರದ ಹುಟ್ಟು ಮತ್ತು ಬೆಳವಣಿಗೆ ಸಾಧ್ಯವಿದೆ ಎಂದರು.</p>.<p>ರಾಜ್ಯದಲ್ಲಿ 6600 ಸಹಕಾರಿ ಸಂಸ್ಥೆಗಳು ನೊಂದಣಿಯಾಗಿವೆ. ಇವುಗಳಲ್ಲಿ 5 ಸಾವಿರ ಸಂಸ್ಥೆಗಳು ಪ್ರಗತಿಯಲ್ಲಿವೆ. ಸದಸ್ಯರು, ಠೇವಣಿದಾರರ ನಂಬಿಕೆ ಉಳಿಸಿಕೊಂಡು ಉದ್ದೇಶಗಳನ್ನು ಈಡೇರಿಸಿಕೊಳ್ಳುವುದು ಸಹಕಾರಿ ಸಂಘದ ಮುಖ್ಯ ಧ್ಯೇಯವಾಗಬೇಕು ಎಂದರು.</p>.<p>ಸಂಘದ ಸಂಸ್ಥಾಪಕ ಅಧ್ಯಕ್ಷ ರಾಜು ಗೌಳಿ ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ನಡೆಯುವ ವಹಿವಾಟಿನ ಮೇಲಿರುವ ವಿಶ್ವಾಸ ಸಹಕಾರಿ ಪತ್ತಿನ ಸಂಘಗಳಲ್ಲಿ ಇಲ್ಲದಿರುವ ಈ ಸಮಯದಲ್ಲಿ ಗ್ರಾಹಕರ ನಂಬಿಕೆ ಉಳಿಸಿಕೊಂಡು ನಮ್ಮ ಸಂಘ ಅಭಿವೃದ್ಧಿಯ ಹಾದಿಯಲ್ಲಿದೆ ಎಂದರು.</p>.<p>ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ನಿರ್ದೇಶಕ ಕೆ.ಶಿವಲಿಂಗಪ್ಪ, ಸಹಕಾರಿ ಕ್ಷೇತ್ರದ ಧುರಿಣರಾದ ಎಂ.ಬಿ.ಕಲಾಲ, ಬಿ.ಎಸ್.ಅಕ್ಕಿವಳ್ಳಿ, ಎ.ಎಸ್.ಬಳ್ಳಾರಿ, ಕಲ್ಯಾಣಕುಮಾರ ಶೆಟ್ಟರ, ಎಲ್.ಟಿ.ಪಾಟೀಲ, ವಿಷ್ಣುಕಾಂತ ಜಾಧವ, ಭೋಜರಾಜ ಕರೂದಿ, ಪುರಸಭೆ ಅಧ್ಯಕ್ಷೆ ರಾಧಿಕಾ ದೇಶಪಾಂಡೆ, ಉಪಾಧ್ಯಕ್ಷೆ ವೀಣಾ ಗುಡಿ ಇದ್ದರು.</p>.<p>ಸಂಘದ ಉಪಾಧ್ಯಕ್ಷ ರಾಮಚಂದ್ರ ಬಮ್ಮನಹಳ್ಳಿ, ನಿರ್ದೇಶಕರಾದ ಗಣೇಶಪ್ಪ ಕೋಡಿಹಳ್ಳಿ, ಶೇಖರ ಜೀವಾಜಿ, ದೀಪಕ ಕಿತ್ತೂರ, ಅರುಣ ಕಿತ್ತೂರ, ಸಂತೋಷ ಟಿಕೋಜಿ, ವಸಂತ ಕಂಕಾಳೆ, ಲಕ್ಷ್ಮೀ ಬಂಕಾಪೂರ, ಆಶಾ ಗೌಳಿ, ಮಂಜುನಾಥ ಕೂಸನೂರ, ಸುನಿಲ ಅರ್ಕಸಾಲಿ, ಮಾರುತಿ ಚಂಚಿಗೊಲ್ಲರ ಹಾಜರಿದ್ದರು.</p>.<p>ಇದಕ್ಕೂ ಮುನ್ನ ನೂತನ ಕಟ್ಟಡದಲ್ಲಿ ನಡೆದ ಹೋಮ, ಪೂಜಾ ಕಾರ್ಯಗಳಲ್ಲಿ ಶಾಸಕ ಶ್ರೀನಿವಾಸ ಮಾನೆ ಮತ್ತು ಮರಾಠ ಪ್ರಾಧಿಕಾರದ ಅಧ್ಯಕ್ಷ ಜಿ.ಎಚ್.ಮರಿಯೋಜಿರಾವ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್: </strong>ಸಹಕಾರಿ ಕ್ಷೇತ್ರ ಬಲವಾಗಿ ಬೆಳೆಯುತ್ತಿದ್ದು, ಗ್ರಾಮೀಣ ಮಟ್ಟದಲ್ಲಿ ಹಲವಾರು ಸಾಮಾಜಿಕ ಸೇವೆಗಳ ಯೋಜನೆಗಳ ಅನುಷ್ಠಾನಕ್ಕಾಗಿ ಸಹಕಾರಿ ರಂಗದ ನೆರವು ಪಡೆಯುವ ಯೋಚನೆಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಜಿ.ನಂಜನಗೌಡ ಹೇಳಿದರು.</p>.<p>ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಛತ್ರಪತಿ ಶಿವಾಜಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಕಟ್ಟಡವನ್ನು ಸೋಮವಾರ ಉದ್ಘಾಟಿಸಿದ ಅವರು, ರಾಜ್ಯ ಸರ್ಕಾರ ಕೂಡ ರೈತರಿಗೆ ಅನುಕೂಲವಾಗುವ ಯೋಜನೆಗಳಿಗೆ ಸಹಕಾರಿ ಸಂಘಗಳ ಪ್ರಯೋಜನ ಪಡೆಯಲಿದೆ ಎಂದರು.</p>.<p>ವಯಕ್ತಿಕ ಲಾಭದ ಚಿಂತನೆಯುಳ್ಳವರು ಸ್ಥಾಪಿಸಿದ ಸಂಸ್ಥೆಗಳು ಅವನತಿಯಾಗಿವೆ. ಸಹಕಾರಿ ಕ್ಷೇತ್ರವು ಸಾಮಾಜಿಕ ಭದ್ಧತೆಯಾಗಿದ್ದು, ಸೇವಾ ಮನೋಭಾವದ ಜನರಿಂದ ಸಹಕಾರಿ ಕ್ಷೇತ್ರದ ಹುಟ್ಟು ಮತ್ತು ಬೆಳವಣಿಗೆ ಸಾಧ್ಯವಿದೆ ಎಂದರು.</p>.<p>ರಾಜ್ಯದಲ್ಲಿ 6600 ಸಹಕಾರಿ ಸಂಸ್ಥೆಗಳು ನೊಂದಣಿಯಾಗಿವೆ. ಇವುಗಳಲ್ಲಿ 5 ಸಾವಿರ ಸಂಸ್ಥೆಗಳು ಪ್ರಗತಿಯಲ್ಲಿವೆ. ಸದಸ್ಯರು, ಠೇವಣಿದಾರರ ನಂಬಿಕೆ ಉಳಿಸಿಕೊಂಡು ಉದ್ದೇಶಗಳನ್ನು ಈಡೇರಿಸಿಕೊಳ್ಳುವುದು ಸಹಕಾರಿ ಸಂಘದ ಮುಖ್ಯ ಧ್ಯೇಯವಾಗಬೇಕು ಎಂದರು.</p>.<p>ಸಂಘದ ಸಂಸ್ಥಾಪಕ ಅಧ್ಯಕ್ಷ ರಾಜು ಗೌಳಿ ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ನಡೆಯುವ ವಹಿವಾಟಿನ ಮೇಲಿರುವ ವಿಶ್ವಾಸ ಸಹಕಾರಿ ಪತ್ತಿನ ಸಂಘಗಳಲ್ಲಿ ಇಲ್ಲದಿರುವ ಈ ಸಮಯದಲ್ಲಿ ಗ್ರಾಹಕರ ನಂಬಿಕೆ ಉಳಿಸಿಕೊಂಡು ನಮ್ಮ ಸಂಘ ಅಭಿವೃದ್ಧಿಯ ಹಾದಿಯಲ್ಲಿದೆ ಎಂದರು.</p>.<p>ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ನಿರ್ದೇಶಕ ಕೆ.ಶಿವಲಿಂಗಪ್ಪ, ಸಹಕಾರಿ ಕ್ಷೇತ್ರದ ಧುರಿಣರಾದ ಎಂ.ಬಿ.ಕಲಾಲ, ಬಿ.ಎಸ್.ಅಕ್ಕಿವಳ್ಳಿ, ಎ.ಎಸ್.ಬಳ್ಳಾರಿ, ಕಲ್ಯಾಣಕುಮಾರ ಶೆಟ್ಟರ, ಎಲ್.ಟಿ.ಪಾಟೀಲ, ವಿಷ್ಣುಕಾಂತ ಜಾಧವ, ಭೋಜರಾಜ ಕರೂದಿ, ಪುರಸಭೆ ಅಧ್ಯಕ್ಷೆ ರಾಧಿಕಾ ದೇಶಪಾಂಡೆ, ಉಪಾಧ್ಯಕ್ಷೆ ವೀಣಾ ಗುಡಿ ಇದ್ದರು.</p>.<p>ಸಂಘದ ಉಪಾಧ್ಯಕ್ಷ ರಾಮಚಂದ್ರ ಬಮ್ಮನಹಳ್ಳಿ, ನಿರ್ದೇಶಕರಾದ ಗಣೇಶಪ್ಪ ಕೋಡಿಹಳ್ಳಿ, ಶೇಖರ ಜೀವಾಜಿ, ದೀಪಕ ಕಿತ್ತೂರ, ಅರುಣ ಕಿತ್ತೂರ, ಸಂತೋಷ ಟಿಕೋಜಿ, ವಸಂತ ಕಂಕಾಳೆ, ಲಕ್ಷ್ಮೀ ಬಂಕಾಪೂರ, ಆಶಾ ಗೌಳಿ, ಮಂಜುನಾಥ ಕೂಸನೂರ, ಸುನಿಲ ಅರ್ಕಸಾಲಿ, ಮಾರುತಿ ಚಂಚಿಗೊಲ್ಲರ ಹಾಜರಿದ್ದರು.</p>.<p>ಇದಕ್ಕೂ ಮುನ್ನ ನೂತನ ಕಟ್ಟಡದಲ್ಲಿ ನಡೆದ ಹೋಮ, ಪೂಜಾ ಕಾರ್ಯಗಳಲ್ಲಿ ಶಾಸಕ ಶ್ರೀನಿವಾಸ ಮಾನೆ ಮತ್ತು ಮರಾಠ ಪ್ರಾಧಿಕಾರದ ಅಧ್ಯಕ್ಷ ಜಿ.ಎಚ್.ಮರಿಯೋಜಿರಾವ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>