ಕೋವಿಡ್ ಆಸ್ಪತ್ರೆಯ ನೋಡಲ್ ಅಧಿಕಾರಿ ಡಾ.ವಿಶ್ವನಾಥ ಸಾಲಿಮಠ ಅವರು ಮಾಧ್ಯಮದವರಿಗೆ ಮಾತನಾಡಿ, ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಆರು ಜನರ ಪೈಕಿ ಮೂವರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದು ಸಂತಸ ತಂದಿದೆ, ಶೀಘ್ರದಲ್ಲಿಯೇ ಇನ್ನುಳಿದ ಮೂರು ಜನ ಗುಣಮುಖರಾಗುವ ಲಕ್ಷಣಗಳಿವೆ. ಇತ್ತೀಚಿನ ಕೊರೊನಾ ಸೋಂಕಿತರಿಗೆ ರೋಗದ ಲಕ್ಷಣಗಳು ಕಾಣುತ್ತಿಲ್ಲ ಎಂದು ತಿಳಿಸಿದರು.