ಸಾರ್ವಜನಿಕರು ಕೂಡ ಕೋವಿಡ್ ನಿಯಮ ಪಾಲಿಸಿ ಸಾಮಗ್ರಿ ಖರೀದಿಸಬೇಕು. ಮೈದಾನವನ್ನು ಹೊರತುಪಡಿಸಿ ಬೇರೆ ಯಾವುದೇ ಸ್ಥಳದಲ್ಲಿ ತರಕಾರಿ, ಹೂವಿನ ವ್ಯಾಪಾರವನ್ನು ಮಾಡದಿರಲು ಶಾಸಕ ನೆಹರು ಓಲೇಕಾರ, ನಗರಸಭೆ ಅಧ್ಯಕ್ಷ ಸಂಜೀವಕುಮಾರ್ ನೀರಲಗಿ ಹಾಗೂ ನಗರಸಭೆ ಪೌರಾಯುಕ್ತ ಪರಶುರಾಮ ಚಲವಾದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.