ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಪ್ರಾಂಶುಪಾಲ ಸೇರಿ 137 ಮಂದಿಗೆ ಕೋವಿಡ್‌

ಜಿಲ್ಲೆಯಲ್ಲಿ 2772ಕ್ಕೆ ಏರಿಕೆಯಾದ ಪ್ರಕರಣ: 29 ಮಂದಿ ಗುಣಮುಖ, ಮೂವರ ಸಾವು
Last Updated 19 ಆಗಸ್ಟ್ 2020, 15:44 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯಲ್ಲಿ ಬುಧವಾರ 137 ಮಂದಿಗೆ ಕೋವಿಡ್-19 ದೃಢಪಟ್ಟಿದೆ ಹಾಗೂ 29 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 2772 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದುವರೆಗೆ 1744 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಹಾಗೂ ಬುಧವಾರದ ಮೂರು ಮರಣ ಪ್ರಕರಣ ಸೇರಿ ಒಟ್ಟಾರೆ 62 ಮಂದಿ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಒಟ್ಟಾರೆ 966 ಸಕ್ರಿಯ ಪ್ರಕರಣಗಳಿವೆ.

ವೈದ್ಯ, ಲ್ಯಾಬ್‍ ಟೆಕ್ನಿಷಿಯನ್, ಪ್ರಾಂಶುಪಾಲ, ಕೆ.ಇ.ಬಿ., ನ್ಯಾಯಾಂಗ, ಶಿಕ್ಷಣ, ಆರೋಗ್ಯ, ರೈಲ್ವೆ ಇಲಾಖೆ ಸಿಬ್ಬಂದಿ ಸೇರಿದಂತೆ ಕರ್ತವ್ಯನಿರತ 17 ಕೊರೊನಾ ವಾರಿಯರ್ಸ್‌ಗೆ ಸೋಂಕು ತಗುಲಿದೆ.ಹಾವೇರಿ-43, ರಾಣೆಬೆನ್ನೂರು-29, ಹಿರೇಕೆರೂರು-10, ಹಾನಗಲ್-4, ಬ್ಯಾಡಗಿ-13, ಸವಣೂರ-15, ಶಿಗ್ಗಾವಿ-22 ಇತರೆ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ಗುಣಮುಖ:

ಶಿಗ್ಗಾವಿ ಹಾಗೂ ರಾಣೆಬೆನ್ನೂರು ತಲಾ 2, ಹಾವೇರಿ-6, ಬ್ಯಾಡಗಿ ಹಾಗೂ ಹಾನಗಲ್ ತಲಾ 1, ಹಿರೇಕೆರೂರ-5 ಹಾಗೂ ಸವಣೂರ ತಾಲ್ಲೂಕಿನ 12 ಮಂದಿ ಬಿಡುಗಡೆ ಹೊಂದಿದ್ದಾರೆ.

ಮರಣದ ವಿವರ:

ಹಾವೇರಿ ತಾಲ್ಲೂಕು ನಾಗೇಂದ್ರನಮಟ್ಟಿಯ 47 ವರ್ಷದ ಪುರುಷ (ಪಿ-241657) ಆ.16ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಆ.17ರಂದು ಮೃತಪಟ್ಟಿದ್ದಾರೆ. ಅಶ್ವಿನಿ ನಗರದ 60 ವರ್ಷದ ಪುರುಷ (ಪಿ-230744) ಆ.15ರಂದು ಆಸ್ಪತ್ರೆಗೆ ದಾಖಲಾಗಿದ್ದು, ಆ.18ರಂದು ಮರಣ ಹೊಂದಿದ್ದಾರೆ ಹಾಗೂ ಬ್ಯಾಡಗಿ ತಾಲ್ಲೂಕು ಬೆಟ್ಟದಮಲ್ಲೇಶ್ವರ ನಗರದ 45 ವರ್ಷದ ಪುರುಷ (ಪಿ-142957) ಜುಲೈ 31ರಂದು ಆಸ್ಪತ್ರೆಗೆ ದಾಖಲಾಗಿದ್ದು, ಅಂದೇ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಪರೀಕ್ಷೆಯಲ್ಲಿ ಕೋವಿಡ್ ದೃಢಪಟ್ಟಿತ್ತು. ನಿಯಮಾನುಸಾರ ಅಂತ್ಯಸಂಸ್ಕಾರ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT