<p><strong>ಹಾವೇರಿ</strong>: ಜಿಲ್ಲೆಯಲ್ಲಿ ಬುಧವಾರ 137 ಮಂದಿಗೆ ಕೋವಿಡ್-19 ದೃಢಪಟ್ಟಿದೆ ಹಾಗೂ 29 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ತಿಳಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಈವರೆಗೆ 2772 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದುವರೆಗೆ 1744 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಹಾಗೂ ಬುಧವಾರದ ಮೂರು ಮರಣ ಪ್ರಕರಣ ಸೇರಿ ಒಟ್ಟಾರೆ 62 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಒಟ್ಟಾರೆ 966 ಸಕ್ರಿಯ ಪ್ರಕರಣಗಳಿವೆ.</p>.<p>ವೈದ್ಯ, ಲ್ಯಾಬ್ ಟೆಕ್ನಿಷಿಯನ್, ಪ್ರಾಂಶುಪಾಲ, ಕೆ.ಇ.ಬಿ., ನ್ಯಾಯಾಂಗ, ಶಿಕ್ಷಣ, ಆರೋಗ್ಯ, ರೈಲ್ವೆ ಇಲಾಖೆ ಸಿಬ್ಬಂದಿ ಸೇರಿದಂತೆ ಕರ್ತವ್ಯನಿರತ 17 ಕೊರೊನಾ ವಾರಿಯರ್ಸ್ಗೆ ಸೋಂಕು ತಗುಲಿದೆ.ಹಾವೇರಿ-43, ರಾಣೆಬೆನ್ನೂರು-29, ಹಿರೇಕೆರೂರು-10, ಹಾನಗಲ್-4, ಬ್ಯಾಡಗಿ-13, ಸವಣೂರ-15, ಶಿಗ್ಗಾವಿ-22 ಇತರೆ ಒಬ್ಬರಿಗೆ ಸೋಂಕು ದೃಢಪಟ್ಟಿದೆ.</p>.<p class="Subhead">ಗುಣಮುಖ:</p>.<p>ಶಿಗ್ಗಾವಿ ಹಾಗೂ ರಾಣೆಬೆನ್ನೂರು ತಲಾ 2, ಹಾವೇರಿ-6, ಬ್ಯಾಡಗಿ ಹಾಗೂ ಹಾನಗಲ್ ತಲಾ 1, ಹಿರೇಕೆರೂರ-5 ಹಾಗೂ ಸವಣೂರ ತಾಲ್ಲೂಕಿನ 12 ಮಂದಿ ಬಿಡುಗಡೆ ಹೊಂದಿದ್ದಾರೆ.</p>.<p class="Subhead">ಮರಣದ ವಿವರ:</p>.<p>ಹಾವೇರಿ ತಾಲ್ಲೂಕು ನಾಗೇಂದ್ರನಮಟ್ಟಿಯ 47 ವರ್ಷದ ಪುರುಷ (ಪಿ-241657) ಆ.16ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಆ.17ರಂದು ಮೃತಪಟ್ಟಿದ್ದಾರೆ. ಅಶ್ವಿನಿ ನಗರದ 60 ವರ್ಷದ ಪುರುಷ (ಪಿ-230744) ಆ.15ರಂದು ಆಸ್ಪತ್ರೆಗೆ ದಾಖಲಾಗಿದ್ದು, ಆ.18ರಂದು ಮರಣ ಹೊಂದಿದ್ದಾರೆ ಹಾಗೂ ಬ್ಯಾಡಗಿ ತಾಲ್ಲೂಕು ಬೆಟ್ಟದಮಲ್ಲೇಶ್ವರ ನಗರದ 45 ವರ್ಷದ ಪುರುಷ (ಪಿ-142957) ಜುಲೈ 31ರಂದು ಆಸ್ಪತ್ರೆಗೆ ದಾಖಲಾಗಿದ್ದು, ಅಂದೇ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಪರೀಕ್ಷೆಯಲ್ಲಿ ಕೋವಿಡ್ ದೃಢಪಟ್ಟಿತ್ತು. ನಿಯಮಾನುಸಾರ ಅಂತ್ಯಸಂಸ್ಕಾರ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಜಿಲ್ಲೆಯಲ್ಲಿ ಬುಧವಾರ 137 ಮಂದಿಗೆ ಕೋವಿಡ್-19 ದೃಢಪಟ್ಟಿದೆ ಹಾಗೂ 29 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ತಿಳಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಈವರೆಗೆ 2772 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದುವರೆಗೆ 1744 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಹಾಗೂ ಬುಧವಾರದ ಮೂರು ಮರಣ ಪ್ರಕರಣ ಸೇರಿ ಒಟ್ಟಾರೆ 62 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಒಟ್ಟಾರೆ 966 ಸಕ್ರಿಯ ಪ್ರಕರಣಗಳಿವೆ.</p>.<p>ವೈದ್ಯ, ಲ್ಯಾಬ್ ಟೆಕ್ನಿಷಿಯನ್, ಪ್ರಾಂಶುಪಾಲ, ಕೆ.ಇ.ಬಿ., ನ್ಯಾಯಾಂಗ, ಶಿಕ್ಷಣ, ಆರೋಗ್ಯ, ರೈಲ್ವೆ ಇಲಾಖೆ ಸಿಬ್ಬಂದಿ ಸೇರಿದಂತೆ ಕರ್ತವ್ಯನಿರತ 17 ಕೊರೊನಾ ವಾರಿಯರ್ಸ್ಗೆ ಸೋಂಕು ತಗುಲಿದೆ.ಹಾವೇರಿ-43, ರಾಣೆಬೆನ್ನೂರು-29, ಹಿರೇಕೆರೂರು-10, ಹಾನಗಲ್-4, ಬ್ಯಾಡಗಿ-13, ಸವಣೂರ-15, ಶಿಗ್ಗಾವಿ-22 ಇತರೆ ಒಬ್ಬರಿಗೆ ಸೋಂಕು ದೃಢಪಟ್ಟಿದೆ.</p>.<p class="Subhead">ಗುಣಮುಖ:</p>.<p>ಶಿಗ್ಗಾವಿ ಹಾಗೂ ರಾಣೆಬೆನ್ನೂರು ತಲಾ 2, ಹಾವೇರಿ-6, ಬ್ಯಾಡಗಿ ಹಾಗೂ ಹಾನಗಲ್ ತಲಾ 1, ಹಿರೇಕೆರೂರ-5 ಹಾಗೂ ಸವಣೂರ ತಾಲ್ಲೂಕಿನ 12 ಮಂದಿ ಬಿಡುಗಡೆ ಹೊಂದಿದ್ದಾರೆ.</p>.<p class="Subhead">ಮರಣದ ವಿವರ:</p>.<p>ಹಾವೇರಿ ತಾಲ್ಲೂಕು ನಾಗೇಂದ್ರನಮಟ್ಟಿಯ 47 ವರ್ಷದ ಪುರುಷ (ಪಿ-241657) ಆ.16ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಆ.17ರಂದು ಮೃತಪಟ್ಟಿದ್ದಾರೆ. ಅಶ್ವಿನಿ ನಗರದ 60 ವರ್ಷದ ಪುರುಷ (ಪಿ-230744) ಆ.15ರಂದು ಆಸ್ಪತ್ರೆಗೆ ದಾಖಲಾಗಿದ್ದು, ಆ.18ರಂದು ಮರಣ ಹೊಂದಿದ್ದಾರೆ ಹಾಗೂ ಬ್ಯಾಡಗಿ ತಾಲ್ಲೂಕು ಬೆಟ್ಟದಮಲ್ಲೇಶ್ವರ ನಗರದ 45 ವರ್ಷದ ಪುರುಷ (ಪಿ-142957) ಜುಲೈ 31ರಂದು ಆಸ್ಪತ್ರೆಗೆ ದಾಖಲಾಗಿದ್ದು, ಅಂದೇ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಪರೀಕ್ಷೆಯಲ್ಲಿ ಕೋವಿಡ್ ದೃಢಪಟ್ಟಿತ್ತು. ನಿಯಮಾನುಸಾರ ಅಂತ್ಯಸಂಸ್ಕಾರ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>