<p><strong>ಹಾವೇರಿ:</strong>ಸರ್ಕಾರಿ ವೈದ್ಯ, ಆಶಾ ಕಾರ್ಯಕರ್ತೆ ಹಾಗೂ ಶಿಕ್ಷಣ ಇಲಾಖೆಯ ಇಬ್ಬರು ನೌಕರರು ಸೇರಿದಂತೆಭಾನುವಾರ ಒಟ್ಟು 146 ಮಂದಿಗೆ ಕೋವಿಡ್-19 ದೃಢಪಟ್ಟಿದೆ. ಇವು ಜಿಲ್ಲೆಯಲ್ಲಿ ಒಂದು ದಿನದಲ್ಲಿ ದಾಖಲಾದ ಗರಿಷ್ಠ ಪ್ರಕರಣಗಳಾಗಿವೆ. 34 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಹಾಗೂ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಈವರೆಗೆ 1186 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಗೊಂಡಿವೆ. ಇಂದಿನವರೆಗೆ 604 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಹಾಗೂ 28 ಜನರು ಮೃತಪಟ್ಟಿದ್ದಾರೆ. 554 ಪ್ರಕರಣಗಳು ಸಕ್ರಿಯವಾಗಿವೆ ಎಂದು ತಿಳಿಸಿದ್ದಾರೆ.</p>.<p>ಭಾನುವಾರ ಪತ್ತೆಯಾದ ಪ್ರಕರಣಗಳಲ್ಲಿ ಸವಣೂರು-11, ಬ್ಯಾಡಗಿ-15, ಹಿರೇಕೆರೂರು-17, ಶಿಗ್ಗಾವಿ– 20, ಹಾವೇರಿ-27 ಹಾಗೂ ರಾಣೆಬೆನ್ನೂರ ತಾಲ್ಲೂಕಿನಲ್ಲಿ 56 ಪ್ರಕರಣಗಳು ಪತ್ತೆಯಾಗಿವೆ.</p>.<p class="Subhead"><strong>ಗುಣಮುಖರ ವಿವರ:</strong>ಸವಣೂರು ಹಾಗೂ ಹಿರೇಕೆರೂರು ತಾಲ್ಲೂಕಿನಲ್ಲಿ ತಲಾ 1, ಶಿಗ್ಗಾವಿ ಹಾಗೂ ರಾಣೆಬೆನ್ನೂರಿನಲ್ಲಿ ತಲಾ -3, ಹಾನಗಲ್-5, ಬ್ಯಾಡಗಿ-7 ಹಾಗೂ ಹಾವೇರಿ ತಾಲ್ಲೂಕಿನಲ್ಲಿ 14 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.</p>.<p>ಸೋಂಕಿತರ ನಿವಾಸದ ಪ್ರದೇಶವನ್ನು ನಿಯಮಾನುಸಾರ ‘ಕಂಟೈನ್ಮೆಂಟ್ ಜೋನ್’ ಹಾಗೂ ‘ಬಫರ್ ಜೋನ್’ ಆಗಿ ಘೋಷಿಸಲಾಗಿದೆ. ಆಯಾ ತಹಶೀಲ್ದಾರ್ಗಳನ್ನು ‘ಇನ್ಸಿಡೆಂಟಲ್ ಕಮಾಂಡರ್’ ಆಗಿ ನೇಮಿಸಲಾಗಿದೆ.</p>.<p class="Subhead"><strong>ವ್ಯಕ್ತಿ ಸಾವು:</strong>ಹಾವೇರಿ ನಗರದ 58 ವರ್ಷದ ಪುರುಷ (ಪಿ-109380) ಜುಲೈ 31ರಂದು ಜಿಲ್ಲಾ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಉಸಿರಾಟದ ತೊಂದರೆಯಿಂದ ಜುಲೈ 27ರಂದು ಆಸ್ಪತ್ರೆಗೆ ದಾಖಲಾಗಿದ್ದರು. ರ್ಯಾಪಿಡ್ ಆ್ಯಂಟಿಜೆನ್ ಕಿಟ್ನಿಂದ ಮೂಗಿನ ದ್ರವದ ಪರೀಕ್ಷೆ ಮಾಡಲಾಗಿದ್ದು, ಸೋಂಕು ದೃಢಪಟ್ಟಿತ್ತು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong>ಸರ್ಕಾರಿ ವೈದ್ಯ, ಆಶಾ ಕಾರ್ಯಕರ್ತೆ ಹಾಗೂ ಶಿಕ್ಷಣ ಇಲಾಖೆಯ ಇಬ್ಬರು ನೌಕರರು ಸೇರಿದಂತೆಭಾನುವಾರ ಒಟ್ಟು 146 ಮಂದಿಗೆ ಕೋವಿಡ್-19 ದೃಢಪಟ್ಟಿದೆ. ಇವು ಜಿಲ್ಲೆಯಲ್ಲಿ ಒಂದು ದಿನದಲ್ಲಿ ದಾಖಲಾದ ಗರಿಷ್ಠ ಪ್ರಕರಣಗಳಾಗಿವೆ. 34 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಹಾಗೂ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಈವರೆಗೆ 1186 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಗೊಂಡಿವೆ. ಇಂದಿನವರೆಗೆ 604 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಹಾಗೂ 28 ಜನರು ಮೃತಪಟ್ಟಿದ್ದಾರೆ. 554 ಪ್ರಕರಣಗಳು ಸಕ್ರಿಯವಾಗಿವೆ ಎಂದು ತಿಳಿಸಿದ್ದಾರೆ.</p>.<p>ಭಾನುವಾರ ಪತ್ತೆಯಾದ ಪ್ರಕರಣಗಳಲ್ಲಿ ಸವಣೂರು-11, ಬ್ಯಾಡಗಿ-15, ಹಿರೇಕೆರೂರು-17, ಶಿಗ್ಗಾವಿ– 20, ಹಾವೇರಿ-27 ಹಾಗೂ ರಾಣೆಬೆನ್ನೂರ ತಾಲ್ಲೂಕಿನಲ್ಲಿ 56 ಪ್ರಕರಣಗಳು ಪತ್ತೆಯಾಗಿವೆ.</p>.<p class="Subhead"><strong>ಗುಣಮುಖರ ವಿವರ:</strong>ಸವಣೂರು ಹಾಗೂ ಹಿರೇಕೆರೂರು ತಾಲ್ಲೂಕಿನಲ್ಲಿ ತಲಾ 1, ಶಿಗ್ಗಾವಿ ಹಾಗೂ ರಾಣೆಬೆನ್ನೂರಿನಲ್ಲಿ ತಲಾ -3, ಹಾನಗಲ್-5, ಬ್ಯಾಡಗಿ-7 ಹಾಗೂ ಹಾವೇರಿ ತಾಲ್ಲೂಕಿನಲ್ಲಿ 14 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.</p>.<p>ಸೋಂಕಿತರ ನಿವಾಸದ ಪ್ರದೇಶವನ್ನು ನಿಯಮಾನುಸಾರ ‘ಕಂಟೈನ್ಮೆಂಟ್ ಜೋನ್’ ಹಾಗೂ ‘ಬಫರ್ ಜೋನ್’ ಆಗಿ ಘೋಷಿಸಲಾಗಿದೆ. ಆಯಾ ತಹಶೀಲ್ದಾರ್ಗಳನ್ನು ‘ಇನ್ಸಿಡೆಂಟಲ್ ಕಮಾಂಡರ್’ ಆಗಿ ನೇಮಿಸಲಾಗಿದೆ.</p>.<p class="Subhead"><strong>ವ್ಯಕ್ತಿ ಸಾವು:</strong>ಹಾವೇರಿ ನಗರದ 58 ವರ್ಷದ ಪುರುಷ (ಪಿ-109380) ಜುಲೈ 31ರಂದು ಜಿಲ್ಲಾ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಉಸಿರಾಟದ ತೊಂದರೆಯಿಂದ ಜುಲೈ 27ರಂದು ಆಸ್ಪತ್ರೆಗೆ ದಾಖಲಾಗಿದ್ದರು. ರ್ಯಾಪಿಡ್ ಆ್ಯಂಟಿಜೆನ್ ಕಿಟ್ನಿಂದ ಮೂಗಿನ ದ್ರವದ ಪರೀಕ್ಷೆ ಮಾಡಲಾಗಿದ್ದು, ಸೋಂಕು ದೃಢಪಟ್ಟಿತ್ತು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>