ರಾಜ್ಯದಲ್ಲಿನ 12 ತರಗತಿವರೆಗೆ ಎಲ್ಲ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ನೀಡಬೇಕು. ಇಲ್ಲವೇ ಕೇರಳ ರಾಜ್ಯ ಸರ್ಕಾರದ ಮಾದರಿಯಲ್ಲಿ ಪ್ರತಿ ತಿಂಗಳು 10 ಕೆ.ಜಿ. ಅಕ್ಕಿ ಹಾಗೂ ಅಗತ್ಯ ಆಹಾರ ಪದಾರ್ಥಗಳನ್ನು 6 ತಿಂಗಳು ವಿದ್ಯಾರ್ಥಿಗಳ ಮನೆಗೆ ತಲುಪಿಸಬೇಕು. ವೈದ್ಯಕೀಯ ವಿದ್ಯಾರ್ಥಿಗಳಿಗೆ 16 ತಿಂಗಳಿಂದ ಬಾಕಿ ಉಳಿಸಿರುವ ಶಿಷ್ಯವೇತನ ಕೂಡಲೇ ಬಿಡುಗಡೆಗೊಳಿಸಿ, ಫೆಲೋಶಿಪ್, ಸ್ಕಾಲರ್ಶಿಪ್, ಶೈಕ್ಷಣಿಕ ಆರ್ಥಿಕ ನೆರವು ನೀಡಬೇಕು.ಲಾಕ್ಡೌನ್ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗಳ ಕುಟುಂಬ ನಿರ್ವಹಣೆಗಾಗಿ ಆರು ತಿಂಗಳ ಕಾಲ ₹7.500 ನೀಡಬೇಕು.ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅತಿಥಿ ಶಿಕ್ಷಕರು, ಉಪನ್ಯಾಸಕರು ಹಾಗೂ ಕಾರ್ಮಿಕರಿಗೆ ಬಾಕಿ ಸಂಬಳ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.