<p> <strong>ಶಿಗ್ಗಾವಿ</strong>: ಕ್ಷುಲ್ಲಕ ಕಾರಣಕ್ಕೆ ಒಂದೇ ಗ್ರಾಮದ ಇಬ್ಬರು ವ್ಯಕ್ತಿಗಳು ಜಗಳ ಮಾಡುವಾಗ ಓರ್ವನಿಗೆ ಚೂರಿ ಇರಿತವಾಗಿದ್ದು, ಗಂಭೀರವಾಗಿ ಗಾಯಗೊಂಡ ಘಟನೆ ತಾಲ್ಲೂಕಿನ ಸದಾಶಿವಪೇಟೆ, ಮುನವಳ್ಳಿ ಗ್ರಾಮದ ಮಾರ್ಗದಲ್ಲಿ ಮಂಗಳವಾರ ನಡೆದಿದೆ.</p>.<p>ಸದಾಶಿವಪೇಟೆ ಗ್ರಾಮದ ಅಟೋ ಚಾಲಕ ಪ್ರವೀಣ ಮತ್ತಿಗಟ್ಟಿ ಚೂರಿ ಇರಿತಕ್ಕೊಳಗಾದ ಯುವಕ ಎಂದು ತಿಳಿದು ಬಂದಿದೆ. ಇಬ್ಬರಿಗೂ ಬಂಕಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ಗೆ ತೆಗೆದುಕೊಂಡು ಹೋಗಲಾಗಿದೆ.</p>.<p>ಸದಾಶಿವಪೇಟೆ ಗ್ರಾಮದಿಂದ ಬಂಕಾಪುರಕ್ಕೆ ಹೋಗುವ ಮಾರ್ಗದಲ್ಲಿ ಸದಾಶಿವಪೇಟೆ ಗ್ರಾಮದ ಕುರಿಗಾಯಿ ಶಣ್ಮುಖಪ್ಪ ನರಗುಂದ ಕುರಿಮೇಯಿಸುತ್ತಿದ್ದಾಗ ಅದೇ ಗ್ರಾಮದ ಅಟೋ ಚಾಲಕ ಪ್ರವೀಣ ಮತ್ತಿಗಟ್ಟಿ ದಾರಿಗಾಗಿ ಜೋರಾಗಿ ಹಾರ್ನ್ (ಶಬ್ಧ) ಹಾಕಿದ್ದಾರೆ. ಈ ವಿಷಯಕ್ಕಾಗಿ ಇಬ್ಬರ ಮಧ್ಯೆ ಮಾತಿನ ಚಕಮಕಿ ಶುರುವಾಗಿದೆ. ಈ ಮಧ್ಯೆ ಕುರಿಗಾಯಿ ಷಣ್ಮುಖಪ್ಪ ಅಟೊ ಚಾಲಕ ಪ್ರವೀಣ ಮತ್ತಿಗಟ್ಟಿಗೆ ಚೂರಿ ಇರಿದಿದ್ದಾನೆ. ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> <strong>ಶಿಗ್ಗಾವಿ</strong>: ಕ್ಷುಲ್ಲಕ ಕಾರಣಕ್ಕೆ ಒಂದೇ ಗ್ರಾಮದ ಇಬ್ಬರು ವ್ಯಕ್ತಿಗಳು ಜಗಳ ಮಾಡುವಾಗ ಓರ್ವನಿಗೆ ಚೂರಿ ಇರಿತವಾಗಿದ್ದು, ಗಂಭೀರವಾಗಿ ಗಾಯಗೊಂಡ ಘಟನೆ ತಾಲ್ಲೂಕಿನ ಸದಾಶಿವಪೇಟೆ, ಮುನವಳ್ಳಿ ಗ್ರಾಮದ ಮಾರ್ಗದಲ್ಲಿ ಮಂಗಳವಾರ ನಡೆದಿದೆ.</p>.<p>ಸದಾಶಿವಪೇಟೆ ಗ್ರಾಮದ ಅಟೋ ಚಾಲಕ ಪ್ರವೀಣ ಮತ್ತಿಗಟ್ಟಿ ಚೂರಿ ಇರಿತಕ್ಕೊಳಗಾದ ಯುವಕ ಎಂದು ತಿಳಿದು ಬಂದಿದೆ. ಇಬ್ಬರಿಗೂ ಬಂಕಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ಗೆ ತೆಗೆದುಕೊಂಡು ಹೋಗಲಾಗಿದೆ.</p>.<p>ಸದಾಶಿವಪೇಟೆ ಗ್ರಾಮದಿಂದ ಬಂಕಾಪುರಕ್ಕೆ ಹೋಗುವ ಮಾರ್ಗದಲ್ಲಿ ಸದಾಶಿವಪೇಟೆ ಗ್ರಾಮದ ಕುರಿಗಾಯಿ ಶಣ್ಮುಖಪ್ಪ ನರಗುಂದ ಕುರಿಮೇಯಿಸುತ್ತಿದ್ದಾಗ ಅದೇ ಗ್ರಾಮದ ಅಟೋ ಚಾಲಕ ಪ್ರವೀಣ ಮತ್ತಿಗಟ್ಟಿ ದಾರಿಗಾಗಿ ಜೋರಾಗಿ ಹಾರ್ನ್ (ಶಬ್ಧ) ಹಾಕಿದ್ದಾರೆ. ಈ ವಿಷಯಕ್ಕಾಗಿ ಇಬ್ಬರ ಮಧ್ಯೆ ಮಾತಿನ ಚಕಮಕಿ ಶುರುವಾಗಿದೆ. ಈ ಮಧ್ಯೆ ಕುರಿಗಾಯಿ ಷಣ್ಮುಖಪ್ಪ ಅಟೊ ಚಾಲಕ ಪ್ರವೀಣ ಮತ್ತಿಗಟ್ಟಿಗೆ ಚೂರಿ ಇರಿದಿದ್ದಾನೆ. ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>