<p><strong>ಹಾನಗಲ್</strong>: ಅಣ್ಣನ ಹೆಂಡತಿ ಮತ್ತು ಆತನ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗುರುವಾರ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p>ಕುಮಾರ ಮರಿಗೌಡರ ಬಂಧಿತ ಆರೋಪಿ. ಈತನ ಬಂಧನಕ್ಕೆ ಹಾನಗಲ್ ಪೊಲೀಸರು ವಿಶೇಷ ತಂಡ ರಚಿಸಿ ಕಾರ್ಯಾಚರಣೆಗೆ ಇಳಿದಿದ್ದರು. ಹುಬ್ಬಳ್ಳಿ ತಾಲ್ಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ಆರೋಪಿ ಇರುವ ಮಾಹಿತಿ ಮೇಲೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.</p>.<p>ಘಟನೆ ನಡೆದ ಯಳ್ಳೂರ ಗ್ರಾಮಕ್ಕೆ ಆರೋಪಿಯನ್ನು ಕರೆದುಕೊಂಡು ಹೋಗಿ, ಪಂಚನಾಮೆ ಮತ್ತಿತರ ಪ್ರಕ್ರಿಯೆಗಳನ್ನು ನಡೆಸಿದ್ದಾರೆ.</p>.<p>ಹಾನಗಲ್ ಸಿಪಿಐ ಶ್ರೀಧರ ಎಸ್.ಆರ್., ಪಿಎಸ್ಐ ಯಲ್ಲಪ್ಪ ಹಿರಗಣ್ಣನವರ, ಆಡೂರ ಪಿಎಸ್ಐ ಸಂಪತ್ಕುಮಾರ ಆನಿಕಿವಿ ಮತ್ತು ಪೊಲೀಸ್ ಸಿಬ್ಬಂದಿ ಹಾಜರಿದ್ದರು.</p>.<p>ಯಳ್ಳೂರ ಗ್ರಾಮದಲ್ಲಿ ನ.4ರಂದು ಬೆಳಗಿನ ಜಾವ ಒಂದೇ ಮನೆಯಲ್ಲಿ ಮೂರು ಜನರ ಕೊಲೆ ನಡೆದಿತ್ತು. ಗೀತಾ ಹೊನ್ನಗೌಡ ಮರಿಗೌಡರ, ಅವರ ಮಕ್ಕಳಾದ ಅಕುಲ್ಗೌಡ ಹೊನ್ನಗೌಡ<br> ಮರಿಗೌಡರ ಮತ್ತು ಅಂಕಿತಾ ಹೊನ್ನಗೌಡ ಮರಿಗೌಡರ ಕೊಲೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್</strong>: ಅಣ್ಣನ ಹೆಂಡತಿ ಮತ್ತು ಆತನ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗುರುವಾರ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p>ಕುಮಾರ ಮರಿಗೌಡರ ಬಂಧಿತ ಆರೋಪಿ. ಈತನ ಬಂಧನಕ್ಕೆ ಹಾನಗಲ್ ಪೊಲೀಸರು ವಿಶೇಷ ತಂಡ ರಚಿಸಿ ಕಾರ್ಯಾಚರಣೆಗೆ ಇಳಿದಿದ್ದರು. ಹುಬ್ಬಳ್ಳಿ ತಾಲ್ಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ಆರೋಪಿ ಇರುವ ಮಾಹಿತಿ ಮೇಲೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.</p>.<p>ಘಟನೆ ನಡೆದ ಯಳ್ಳೂರ ಗ್ರಾಮಕ್ಕೆ ಆರೋಪಿಯನ್ನು ಕರೆದುಕೊಂಡು ಹೋಗಿ, ಪಂಚನಾಮೆ ಮತ್ತಿತರ ಪ್ರಕ್ರಿಯೆಗಳನ್ನು ನಡೆಸಿದ್ದಾರೆ.</p>.<p>ಹಾನಗಲ್ ಸಿಪಿಐ ಶ್ರೀಧರ ಎಸ್.ಆರ್., ಪಿಎಸ್ಐ ಯಲ್ಲಪ್ಪ ಹಿರಗಣ್ಣನವರ, ಆಡೂರ ಪಿಎಸ್ಐ ಸಂಪತ್ಕುಮಾರ ಆನಿಕಿವಿ ಮತ್ತು ಪೊಲೀಸ್ ಸಿಬ್ಬಂದಿ ಹಾಜರಿದ್ದರು.</p>.<p>ಯಳ್ಳೂರ ಗ್ರಾಮದಲ್ಲಿ ನ.4ರಂದು ಬೆಳಗಿನ ಜಾವ ಒಂದೇ ಮನೆಯಲ್ಲಿ ಮೂರು ಜನರ ಕೊಲೆ ನಡೆದಿತ್ತು. ಗೀತಾ ಹೊನ್ನಗೌಡ ಮರಿಗೌಡರ, ಅವರ ಮಕ್ಕಳಾದ ಅಕುಲ್ಗೌಡ ಹೊನ್ನಗೌಡ<br> ಮರಿಗೌಡರ ಮತ್ತು ಅಂಕಿತಾ ಹೊನ್ನಗೌಡ ಮರಿಗೌಡರ ಕೊಲೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>