ಈ ವೇಳೆ ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಈ ಹಿಂದೆ ತಾಲ್ಲೂಕಿನ ಮೋಟೆಬೆನ್ನೂರ, ಬುಡಪನಹಳ್ಳಿ ಹಾಗೂ ಬಿಸಲಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರೈತರ ಬೆಳೆ ವಿಮೆ ಪರಿಹಾರವನ್ನು ನೀಡಲು ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಸಾಮಾನ್ಯ ವಿಮಾ ಸಂಸ್ಥೆ ತಿರಸ್ಕರಿಸಿತ್ತು. 1,581 ಎಕರೆ ಪ್ರದೇಶದಲ್ಲಿ ಬಿತ್ತನೆ ಮಾಡಿದ ಗೋವಿನ ಜೋಳಕ್ಕೆ ₹4.92ಕೋಟಿ ಮೊತ್ತಕ್ಕೆ ವಿಮೆ ಕಂತು ಪಾವತಿಸಲಾಗಿತ್ತು.