<p><strong>ರಾಣೆಬೆನ್ನೂರು:</strong> ತಾಲ್ಲೂಕಿನ ಹರನಗಿರಿ ಗ್ರಾಮದ ದಲಿತ ಕಾಲೊನಿಯಲ್ಲಿ ಅಳವಡಿಸಿದ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಫ್ಲೆಕ್ಸ್, ಬ್ಯಾನರ್ ಅನ್ನು ಯಾರೋ ಕಿಡಿಗೇಡಿಗಳು ಸೋಮವಾರ ತಡರಾತ್ರಿ ರಾತ್ರಿ ಹರಿದು ಹಾಕಿದ್ದನ್ನು ಖಂಡಿಸಿ ಅಲ್ಲಿನ ನಿವಾಸಿಗಳು ಮಂಗಳವಾರ ಬೆಳಿಗ್ಗೆ ಮುಖ್ಯರಸ್ತೆಗೆ ಮುಳ್ಳು ಹಾಕಿ ತೀವ್ರ ಪ್ರತಿಭಟನೆ ನಡೆಸಿದರು.</p>.<p>ಯುವ ಮುಖಂಡ ಉಚ್ಚೆಂಗೆಪ್ಪ ಪುಟ್ಟಪ್ಪನವರ ಮಾತನಾಡಿ, ಹರನಗಿರಿ ಗ್ರಾಮದ ದಲಿತ ಕಾಲೊನಿಯಲ್ಲಿ ಅನೇಕ ವರ್ಷಗಳಿಂದ ಅಂಬೇಡ್ಕರ್ ಅವರ ನಾಮಫಲಕವನ್ನು ಅಳವಡಿಸಲಾಗಿತ್ತು. ಯಾವಾಗಲೂ ಇಂತಹ ದುರ್ಘಟನೆ ನಡೆದಿದ್ದಿಲ್ಲ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಇಂತಹ ನೀಚ ಕೃತ್ಯ ವ್ಯಸಗಿದ್ದಾರೆ ಎಂದು ದೂರಿದರು.</p>.<p>ಈ ಕೃತ್ಯಕ್ಕೆ ಕಾರಣರಾದ ಕಿಡಿಗೇಡಿಗಳನ್ನ ಕೂಡಲೇ ಬಂಧಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.</p>.<p>ಘಟನಾ ಸ್ಥಳಕ್ಕೆ ಡಿವೈಎಸ್ಪಿ ಲೋಕೇಶ್.ಜೆ ಭೇಟಿ ನೀಡಿ ಕಿಡಿಗೇಡಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿದರು. ನಗರ ಠಾಣೆ ಸಿಪಿಐ ಶಂಕರ್ ಹಾಗೂ ಗ್ರಾಮೀಣ ಪಿಎಸ್ಐ ರಾಮಚಂದ್ರ ನಿಂಗಜ್ಜೇರ ಇದ್ದರು.</p>.<p>ಗುತ್ಯಪ್ಪ ಪುಟ್ಟಮ್ಮನವರ, ನಾಗಪ್ಪ ಪುಟ್ಟಪ್ಪನವರ, ಹೊನ್ನಪ್ಪ ಚಿಕ್ಕಪ್ಪನವರ, ಸಾವಿತ್ರಮ್ಮ ಚೌಡಪ್ಪನವರ, ಗ್ಯಾನಪ್ಪ ಕೆಂಚಮ್ಮನವರ, ಭೀಮಪ್ಪ ಹಲಗೇರಿ, ರತ್ನವ್ವ ಕೆಂಚಪ್ಪನವರ, ಅಂಜಪ್ಪ ಪುಟ್ಟಪ್ಪನವರ ಸೇರಿದಂತೆ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಗ್ರಾಮೀಣ ಠಾಣೆ ಪೊಲೀಸರು ಸೂಕ್ತ ಬಂದೋಬಸ್ತ್ ಒದಗಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು:</strong> ತಾಲ್ಲೂಕಿನ ಹರನಗಿರಿ ಗ್ರಾಮದ ದಲಿತ ಕಾಲೊನಿಯಲ್ಲಿ ಅಳವಡಿಸಿದ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಫ್ಲೆಕ್ಸ್, ಬ್ಯಾನರ್ ಅನ್ನು ಯಾರೋ ಕಿಡಿಗೇಡಿಗಳು ಸೋಮವಾರ ತಡರಾತ್ರಿ ರಾತ್ರಿ ಹರಿದು ಹಾಕಿದ್ದನ್ನು ಖಂಡಿಸಿ ಅಲ್ಲಿನ ನಿವಾಸಿಗಳು ಮಂಗಳವಾರ ಬೆಳಿಗ್ಗೆ ಮುಖ್ಯರಸ್ತೆಗೆ ಮುಳ್ಳು ಹಾಕಿ ತೀವ್ರ ಪ್ರತಿಭಟನೆ ನಡೆಸಿದರು.</p>.<p>ಯುವ ಮುಖಂಡ ಉಚ್ಚೆಂಗೆಪ್ಪ ಪುಟ್ಟಪ್ಪನವರ ಮಾತನಾಡಿ, ಹರನಗಿರಿ ಗ್ರಾಮದ ದಲಿತ ಕಾಲೊನಿಯಲ್ಲಿ ಅನೇಕ ವರ್ಷಗಳಿಂದ ಅಂಬೇಡ್ಕರ್ ಅವರ ನಾಮಫಲಕವನ್ನು ಅಳವಡಿಸಲಾಗಿತ್ತು. ಯಾವಾಗಲೂ ಇಂತಹ ದುರ್ಘಟನೆ ನಡೆದಿದ್ದಿಲ್ಲ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಇಂತಹ ನೀಚ ಕೃತ್ಯ ವ್ಯಸಗಿದ್ದಾರೆ ಎಂದು ದೂರಿದರು.</p>.<p>ಈ ಕೃತ್ಯಕ್ಕೆ ಕಾರಣರಾದ ಕಿಡಿಗೇಡಿಗಳನ್ನ ಕೂಡಲೇ ಬಂಧಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.</p>.<p>ಘಟನಾ ಸ್ಥಳಕ್ಕೆ ಡಿವೈಎಸ್ಪಿ ಲೋಕೇಶ್.ಜೆ ಭೇಟಿ ನೀಡಿ ಕಿಡಿಗೇಡಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿದರು. ನಗರ ಠಾಣೆ ಸಿಪಿಐ ಶಂಕರ್ ಹಾಗೂ ಗ್ರಾಮೀಣ ಪಿಎಸ್ಐ ರಾಮಚಂದ್ರ ನಿಂಗಜ್ಜೇರ ಇದ್ದರು.</p>.<p>ಗುತ್ಯಪ್ಪ ಪುಟ್ಟಮ್ಮನವರ, ನಾಗಪ್ಪ ಪುಟ್ಟಪ್ಪನವರ, ಹೊನ್ನಪ್ಪ ಚಿಕ್ಕಪ್ಪನವರ, ಸಾವಿತ್ರಮ್ಮ ಚೌಡಪ್ಪನವರ, ಗ್ಯಾನಪ್ಪ ಕೆಂಚಮ್ಮನವರ, ಭೀಮಪ್ಪ ಹಲಗೇರಿ, ರತ್ನವ್ವ ಕೆಂಚಪ್ಪನವರ, ಅಂಜಪ್ಪ ಪುಟ್ಟಪ್ಪನವರ ಸೇರಿದಂತೆ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಗ್ರಾಮೀಣ ಠಾಣೆ ಪೊಲೀಸರು ಸೂಕ್ತ ಬಂದೋಬಸ್ತ್ ಒದಗಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>