ಮೆರವಣಿಗೆಯು ದ್ಯಾಮವ್ವನ ಗುಡಿ ಓಣಿಯಿಂದ ಹೊರಟುನಾಯ್ಕರ ಚಾಳ, ಹಳೇ ಅಂಚೆ ಕಚೇರಿ ರಸ್ತೆ, ಜೈನರ ಓಣಿ, ಹಳೇ ಊರಿನ ಓಣಿ, ಶ್ರೀರಾಮ ದೇವರ ಗುಡಿ, ಗಾಂಧಿ ಸರ್ಕಲ್ ತಲುಪಿತು. ನಂತರ ಕಲ್ಲು ಮಂಟಪ ರಸ್ತೆ, ಬಸ್ತಿ ಓಣಿ, ತರಕಾರಿ ಮಾರ್ಕೆಟ್, ಗೌಳಿಗಲ್ಲಿ, ಯಾಲಕ್ಕಿ ಓಣಿ, ಅಂಬೇಡ್ಕರ ಸರ್ಕಲ್, ಸುಭಾಷ್ ಸರ್ಕಲ್, ಮೇಲಿನ ಪೇಟೆ, ಹಳೇ ಚಾವಡಿ ಮೂಲಕ ಬುಧವಾರ ಬ್ರಾಹ್ಮೀ ಮೂಹೂರ್ತ ನಸುಕಿನ 4 ಗಂಟೆಗೆ ಚೌತಮನಿ ಕಟ್ಟಿಯನ್ನು ತಲುಪಿತು. ಅಲ್ಲಿ ಗ್ರಾಮದೇವತೆ ದ್ಯಾಮವ್ವ ದೇವಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.