ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಡಾ.ಸಂತೋಷ್ ಮಾತನಾಡಿ, 2018–19 ನೇ ಸಾಲಿನಿಂದ ಈ ಕಾರ್ಯಕ್ರಮವು ಜಾರಿಗೆ ಬಂದಿದ್ದು, 2018ರ ಜೂನ್ ನಿಂದ ಈ ತನಕ 9 ಕಡೆ ದಾಳಿ ನಡೆಸಿ 70 ಪ್ರಕರಣಗಳನ್ನು ದಾಖಲಿಸಲಾಗಿದೆ. 65 ಶಾಲಾ-ಕಾಲೇಜುಗಳಲ್ಲಿ ಜಾಗೃತಿ, 29 ಸಮುದಾಯ ಗುಂಪು ಚರ್ಚೆ ಹಾಗೂ ಆರು ಕಡೆಗಳಲ್ಲಿ ಕಾರ್ಮಿಕರಿಗೆ ತರಬೇತಿ ನೀಡಲಾಗಿದೆ. 800 ಜನರಿಗೆ ಜಿಲ್ಲಾ ಮಟ್ಟದಲ್ಲಿ ಸಮಾಲೋಚನೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.