<p><strong>ಬ್ಯಾಡಗಿ</strong>: ‘ಖಾಸಗಿ, ಅನುದಾನಿತ ಕಾಲೇಜುಗಳಲ್ಲಿ ದಶಕಗಳಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಂದಾಗದ ಸರ್ಕಾರದ ವಿಳಂಬ ನೀತಿಯಿಂದಾಗಿ ಆಡಳಿತ ಮಂಡಳಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ’ ಎಂದು ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ ಹೇಳಿದರು.</p>.<p>ಪಟ್ಟಣದ ಬಿಇಎಸ್ಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ 36 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಾಚಾರ್ಯ ಎಸ್.ಜಿ. ವೈದ್ಯ ಹಾಗೂ ಶಿಕ್ಷಕಿ ಸುನಂದಾ ಮೂಲಿಮನಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಮಾಣ ಹೆಚ್ಚಾಗುತ್ತಿದೆ. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ. ಆದರೆ, ಅರೆಕಾಲಿಕ ಉಪನ್ಯಾಸಕರಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಿಂದಲೇ ವೇತನ ನೀಡಬೇಕಿದ್ದು, ಆರ್ಥಿಕ ಹೊರೆ ಆಗುತ್ತಿದೆ’ ಎಂದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ‘ಎಸ್.ಜಿ. ವೈದ್ಯ ಅವರು ಪ್ರಾಚಾರ್ಯ ವೃತ್ತಿ ಜೊತೆಗೆ ಪ್ರವೃತ್ತಿಯಾಗಿ ಹಲವಾರು ಸಂಶೋಧನಾ ಗ್ರಂಥಗಳನ್ನು ರಚಿಸಿದ್ದಾರೆ’ ಎಂದು ಹೇಳಿದರು.</p>.<p>ಸಂಸ್ಥೆಯ ಸದಸ್ಯರಾದ ಎಸ್.ಎನ್. ನಿಡಗುಂದಿ, ವಿ.ಎಸ್. ಮೊರಿಗೇರಿ, ಎಲ್.ಎಂ. ಪಾಟೀಲ, ಸಂಗಪ್ಪ ಮಾಳಗಿ, ಗಿರೀಶ ಪಾಟೀಲ, ಸಿದ್ದು ಪಾಟೀಲ, ನಾಗರಾಜ ದೇಸೂರ, ಅಂಬಾಲಾಲ ಜೈನ್, ಆನಂದ ಜೈನ್, ಪಿ.ಟಿ. ಲಕ್ಕಣ್ಣನವರ, ಕೆ.ಜಿ. ಖಂಡೇಬಾಗೂರ, ಕೆ.ಎಂ. ಕಟಗಿಹಳ್ಳಿ, ಚನ್ನಮ್ಮ ಕೋರಿಶೆಟ್ಟರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ</strong>: ‘ಖಾಸಗಿ, ಅನುದಾನಿತ ಕಾಲೇಜುಗಳಲ್ಲಿ ದಶಕಗಳಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಂದಾಗದ ಸರ್ಕಾರದ ವಿಳಂಬ ನೀತಿಯಿಂದಾಗಿ ಆಡಳಿತ ಮಂಡಳಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ’ ಎಂದು ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ ಹೇಳಿದರು.</p>.<p>ಪಟ್ಟಣದ ಬಿಇಎಸ್ಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ 36 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಾಚಾರ್ಯ ಎಸ್.ಜಿ. ವೈದ್ಯ ಹಾಗೂ ಶಿಕ್ಷಕಿ ಸುನಂದಾ ಮೂಲಿಮನಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಮಾಣ ಹೆಚ್ಚಾಗುತ್ತಿದೆ. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ. ಆದರೆ, ಅರೆಕಾಲಿಕ ಉಪನ್ಯಾಸಕರಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಿಂದಲೇ ವೇತನ ನೀಡಬೇಕಿದ್ದು, ಆರ್ಥಿಕ ಹೊರೆ ಆಗುತ್ತಿದೆ’ ಎಂದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ‘ಎಸ್.ಜಿ. ವೈದ್ಯ ಅವರು ಪ್ರಾಚಾರ್ಯ ವೃತ್ತಿ ಜೊತೆಗೆ ಪ್ರವೃತ್ತಿಯಾಗಿ ಹಲವಾರು ಸಂಶೋಧನಾ ಗ್ರಂಥಗಳನ್ನು ರಚಿಸಿದ್ದಾರೆ’ ಎಂದು ಹೇಳಿದರು.</p>.<p>ಸಂಸ್ಥೆಯ ಸದಸ್ಯರಾದ ಎಸ್.ಎನ್. ನಿಡಗುಂದಿ, ವಿ.ಎಸ್. ಮೊರಿಗೇರಿ, ಎಲ್.ಎಂ. ಪಾಟೀಲ, ಸಂಗಪ್ಪ ಮಾಳಗಿ, ಗಿರೀಶ ಪಾಟೀಲ, ಸಿದ್ದು ಪಾಟೀಲ, ನಾಗರಾಜ ದೇಸೂರ, ಅಂಬಾಲಾಲ ಜೈನ್, ಆನಂದ ಜೈನ್, ಪಿ.ಟಿ. ಲಕ್ಕಣ್ಣನವರ, ಕೆ.ಜಿ. ಖಂಡೇಬಾಗೂರ, ಕೆ.ಎಂ. ಕಟಗಿಹಳ್ಳಿ, ಚನ್ನಮ್ಮ ಕೋರಿಶೆಟ್ಟರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>