<p><strong>ಹಾವೇರಿ:</strong> ದೇಶದ ರಾಜಧಾನಿ ನವದೆಹಲಿಯ ಕೆಂಪುಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದರಿಂದ ಎಚ್ಚೆತ್ತುಕೊಂಡಿರುವ ಹಾವೇರಿ ಜಿಲ್ಲಾ ಪೊಲೀಸರು, ಜಿಲ್ಲಾ ಕೇಂದ್ರ ಹಾಗೂ ಎಲ್ಲ ತಾಲ್ಲೂಕಿನ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.</p>.<p>ಸ್ಫೋಟ ಪ್ರಕರಣ ಹಿನ್ನೆಲೆಯಲ್ಲಿ ಇಡೀ ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಹೀಗಾಗಿ, ಹಾವೇರಿ ನಗರದ ಹಲವು ಸ್ಥಳಗಳಲ್ಲಿ ಪೊಲೀಸರು ಮಂಗಳವಾರ ಶೋಧ ನಡೆಸಿದರು. ತಾಲ್ಲೂಕು ಕೇಂದ್ರಗಳ ಪ್ರಮುಖ ಸ್ಥಳಗಳಲ್ಲಿಯೂ ಸುತ್ತಾಡಿದ ಪೊಲೀಸರು, ಪರಿಶೀಲನೆ ನಡೆಸಿದರು.</p>.<p>ಹಾವೇರಿ ರೈಲು ನಿಲ್ದಾಣಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಮೇತ ಭೇಟಿ ನೀಡಿದ ಪೊಲೀಸರು, ಪ್ರಯಾಣಿಕರ ಬ್ಯಾಗ್ಗಳನ್ನು ತಪಾಸಣೆ ನಡೆಸಿದರು. ನಂತರ, ಪ್ರತಿಯೊಂದು ಸ್ಥಳದಲ್ಲಿಯೂ ಪ್ರತಿಯೊಂದು ಅನುಮಾನಾಸ್ಪದ ವಸ್ತುಗಳನ್ನು ಲೋಹ ಶೋಧಕದಿಂದ ತಪಾಸಣೆ ನಡೆಸಿದರು.</p>.<p>ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳು ಹಾದು ಹೋಗಿವೆ. ಈ ರಸ್ತೆಗಳಲ್ಲಿಯೂ ಟೋಲ್ಗೇಟ್ ಸಿಬ್ಬಂದಿ ಸಹಾಯದಿಂದ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.</p>.<p>ಹಾವೇರಿ ಜಿಲ್ಲೆಯ ಗಡಿ ಪ್ರವೇಶಿಸುವ ಸ್ಥಳಗಳಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ. ಬಸ್ ನಿಲ್ದಾಣ, ಮಾರುಕಟ್ಟೆ, ತಹಶೀಲ್ದಾರ್ ಕಚೇರಿ, ಶಾಲೆ, ಕಾಲೇಜುಗಳು, ಖಾಸಗಿ ಸಂಸ್ಥೆಗಳು ಹಾಗೂ ಪ್ರಮುಖ ಸಾರ್ವಜನಿಕ ಪ್ರದೇಶಗಳಲ್ಲಿಯೂ ಪೊಲೀಸರು ಮಂಗಳವಾರ ತಪಾಸಣೆ ನಡೆಸಿದರು.</p>.<p>ಯಾರಾದರೂ ಅನುಮಾಸ್ಪದ ವ್ಯಕ್ತಿಗಳು ಕಂಡುಬಂದರೆ ಪೊಲೀಸರಿಗೆ ಅಥವಾ 112ಕ್ಕೆ ಕರೆ ಮಾಡುವಂತೆ ಪೊಲೀಸರು ಜನರಲ್ಲಿ ಜಾಗೃತಿ ಮೂಡಿಸಿದರು.</p>.<p>‘ನಿಯಂತ್ರಣ ಕೊಠಡಿಗೆ ಹಾಗೂ ಠಾಣೆಗಳಿಗೆ ಬರುವ ದೂರುಗಳನ್ನು ನಿರ್ಲಕ್ಷಿಸದಂತೆ, ಅನುಮಾನಾಸ್ಪದ ಕರೆಗಳಿದ್ದರೆ ತಕ್ಷಣ ಮೇಲಧಿಕಾರಿಗಳಿಗೆ ತಿಳಿಸಬೇಕು’ ಎಂದು ಜಿಲ್ಲಾ ಎಸ್ಪಿ ಯಶೋಧಾ ವಂಟಗೋಡಿ ಅವರು ಸಿಬ್ಬಂದಿಗೆ ತಾಕೀತು ಮಾಡಿದ್ದಾರೆ.</p>.<p>ಹೊರ ರಾಜ್ಯದ ನೋಂದಣಿ ಸಂಖ್ಯೆ ಇರುವ ವಾಹನಗಳನ್ನು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ತಪಾಸಣೆಗಾಗಿ ಪೊಲೀಸರು, ಶ್ವಾನ ದಳವನ್ನೂ ಬಳಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ದೇಶದ ರಾಜಧಾನಿ ನವದೆಹಲಿಯ ಕೆಂಪುಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದರಿಂದ ಎಚ್ಚೆತ್ತುಕೊಂಡಿರುವ ಹಾವೇರಿ ಜಿಲ್ಲಾ ಪೊಲೀಸರು, ಜಿಲ್ಲಾ ಕೇಂದ್ರ ಹಾಗೂ ಎಲ್ಲ ತಾಲ್ಲೂಕಿನ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.</p>.<p>ಸ್ಫೋಟ ಪ್ರಕರಣ ಹಿನ್ನೆಲೆಯಲ್ಲಿ ಇಡೀ ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಹೀಗಾಗಿ, ಹಾವೇರಿ ನಗರದ ಹಲವು ಸ್ಥಳಗಳಲ್ಲಿ ಪೊಲೀಸರು ಮಂಗಳವಾರ ಶೋಧ ನಡೆಸಿದರು. ತಾಲ್ಲೂಕು ಕೇಂದ್ರಗಳ ಪ್ರಮುಖ ಸ್ಥಳಗಳಲ್ಲಿಯೂ ಸುತ್ತಾಡಿದ ಪೊಲೀಸರು, ಪರಿಶೀಲನೆ ನಡೆಸಿದರು.</p>.<p>ಹಾವೇರಿ ರೈಲು ನಿಲ್ದಾಣಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಮೇತ ಭೇಟಿ ನೀಡಿದ ಪೊಲೀಸರು, ಪ್ರಯಾಣಿಕರ ಬ್ಯಾಗ್ಗಳನ್ನು ತಪಾಸಣೆ ನಡೆಸಿದರು. ನಂತರ, ಪ್ರತಿಯೊಂದು ಸ್ಥಳದಲ್ಲಿಯೂ ಪ್ರತಿಯೊಂದು ಅನುಮಾನಾಸ್ಪದ ವಸ್ತುಗಳನ್ನು ಲೋಹ ಶೋಧಕದಿಂದ ತಪಾಸಣೆ ನಡೆಸಿದರು.</p>.<p>ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳು ಹಾದು ಹೋಗಿವೆ. ಈ ರಸ್ತೆಗಳಲ್ಲಿಯೂ ಟೋಲ್ಗೇಟ್ ಸಿಬ್ಬಂದಿ ಸಹಾಯದಿಂದ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.</p>.<p>ಹಾವೇರಿ ಜಿಲ್ಲೆಯ ಗಡಿ ಪ್ರವೇಶಿಸುವ ಸ್ಥಳಗಳಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ. ಬಸ್ ನಿಲ್ದಾಣ, ಮಾರುಕಟ್ಟೆ, ತಹಶೀಲ್ದಾರ್ ಕಚೇರಿ, ಶಾಲೆ, ಕಾಲೇಜುಗಳು, ಖಾಸಗಿ ಸಂಸ್ಥೆಗಳು ಹಾಗೂ ಪ್ರಮುಖ ಸಾರ್ವಜನಿಕ ಪ್ರದೇಶಗಳಲ್ಲಿಯೂ ಪೊಲೀಸರು ಮಂಗಳವಾರ ತಪಾಸಣೆ ನಡೆಸಿದರು.</p>.<p>ಯಾರಾದರೂ ಅನುಮಾಸ್ಪದ ವ್ಯಕ್ತಿಗಳು ಕಂಡುಬಂದರೆ ಪೊಲೀಸರಿಗೆ ಅಥವಾ 112ಕ್ಕೆ ಕರೆ ಮಾಡುವಂತೆ ಪೊಲೀಸರು ಜನರಲ್ಲಿ ಜಾಗೃತಿ ಮೂಡಿಸಿದರು.</p>.<p>‘ನಿಯಂತ್ರಣ ಕೊಠಡಿಗೆ ಹಾಗೂ ಠಾಣೆಗಳಿಗೆ ಬರುವ ದೂರುಗಳನ್ನು ನಿರ್ಲಕ್ಷಿಸದಂತೆ, ಅನುಮಾನಾಸ್ಪದ ಕರೆಗಳಿದ್ದರೆ ತಕ್ಷಣ ಮೇಲಧಿಕಾರಿಗಳಿಗೆ ತಿಳಿಸಬೇಕು’ ಎಂದು ಜಿಲ್ಲಾ ಎಸ್ಪಿ ಯಶೋಧಾ ವಂಟಗೋಡಿ ಅವರು ಸಿಬ್ಬಂದಿಗೆ ತಾಕೀತು ಮಾಡಿದ್ದಾರೆ.</p>.<p>ಹೊರ ರಾಜ್ಯದ ನೋಂದಣಿ ಸಂಖ್ಯೆ ಇರುವ ವಾಹನಗಳನ್ನು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ತಪಾಸಣೆಗಾಗಿ ಪೊಲೀಸರು, ಶ್ವಾನ ದಳವನ್ನೂ ಬಳಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>