ದೆಹಲಿಯಲ್ಲಿ ನಿರಂತರವಾಗಿ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ರೈತ ಮುಖಂಡರನ್ನು ಕರೆದು ಮಾತನಾಡಿಸುವ ಸೌಜನ್ಯ ತೋರುತ್ತಿಲ್ಲ. ರೈಲ್ವೆ, ವಿದ್ಯುತ್, ವಿಮಾನಸಂಸ್ಥೆ, ರಸ್ತೆ, ಬ್ಯಾಂಕ್ ಎಲ್ಲವನ್ನೂ ಖಾಸಗೀಕರಣ ಮಾಡಿ ದೇಶವನ್ನೇ ಮಾರಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೊರಟಿದೆ. ‘ಬಾರುಕೋಲು ಚಾಟಿ ಚಳವಳಿ’ ಮೂಲಕ ಜನಪ್ರತಿನಿಧಿಗಳ ಬೆನ್ನು ಹತ್ತಿ ಬುದ್ಧಿ ಕಲಿಸುತ್ತೇವೆ ಎಂದು ಗುಡುಗಿದರು.