ಕೊರೊನಾ ಸೋಂಕು ಹಾವಳಿಯಿಂದ ಎರಡು ತಿಂಗಳು ದೇಶದಾದ್ಯಂತ ಲಾಕ್ಡೌಕ್ ಜಾರಿಯಾಯಿತು. ಇದರಿಂದ ಧಾರ್ಮಿಕ ಸಭೆ, ಮದುವೆ ಹಾಗೂ ಇತರೆ ಕಾರ್ಯಕ್ರಮಗಳು ರದ್ದಾದವು. ಎಲ್ಲಾ ಕಲಾವಿದರಿಗೆ ತಲಾ ₹ 2 ಸಾವಿರ ಸಹಾಯಧನ ನೀಡುತ್ತೇವೆ ಎಂದು ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಇಲ್ಲಿಯವರೆಗೂ ಯಾವುದೇ ಸಹಾಯಧನ ನೀಡಿರುವುದಿಲ್ಲ ಎಂದು ಕಲಾವಿದ ವೀರಭದ್ರಪ್ಪ ಎಸ್.ಹೊಮ್ಮರಡಿ ಬೇಸರ ವ್ಯಕ್ತಪಡಿಸಿದ್ದಾರೆ.