<p><strong>ಬ್ಯಾಡಗಿ:</strong> ‘ಅಂಗವಿಕಲರ ಬಗ್ಗೆ ಅನುಕಂಪ ತೋರಿದರಷ್ಟೇ ಸಾಲದು, ಅವರಿಗೆ ಅವಕಾಶ ನೀಡಬೇಕಾದ್ದು ಮುಖ್ಯ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ. ಮಲ್ಲಿಕಾರ್ಜುನ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಅಂಗವಿಕಲರ ಕಲ್ಯಾಣ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ ಸುಗಮ್ಯ ಯಾತ್ರೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಅಂಗವಿಕಲರಿಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸಲು ಸುಗಮ್ಯ ಯಾತ್ರೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಅವರಿಗೆ ಅನುಕೂಲ ಕಲ್ಪಿಸಲಾಗುವುದು’ ಎಂದರು.</p>.<p>ಅಂಗವಿಕಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಾಂಡು ಸುತಾರ ಮಾತನಾಡಿ, ‘ತಾಲ್ಲೂಕಿನಲ್ಲಿ ಸುಳ್ಳು ಪ್ರಮಾಣಪತ್ರದ ಹಾವಳಿ ಮೀತಿ ಮೀರಿದ್ದು, ನೂನತೆ ಇಲ್ಲದವರೂ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯ ಪಡೆಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿದರು.</p>.<p>‘ಅಂಗವಿಕಲರಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಕಾರಣಕ್ಕೆ ದುರ್ಬಳಕೆ ಮಾಡುತ್ತಿರುವ ಪ್ರಕರಣಗಳೂ ಹೆಚ್ಚುತ್ತಿವೆ. ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಫ್. ಹುಳ್ಯಾಳ, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಪ್ರಕಾಶ ಹಿರೇಮಠ, ನಾಗರಾಜ ಅಗಸನಹಳ್ಳಿ, ಶಾಂತಾ ಪಟ್ಟಣಶೆಟ್ಟಿ, ಚಂದ್ರಶೇಖರ ಮಳಿಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> ‘ಅಂಗವಿಕಲರ ಬಗ್ಗೆ ಅನುಕಂಪ ತೋರಿದರಷ್ಟೇ ಸಾಲದು, ಅವರಿಗೆ ಅವಕಾಶ ನೀಡಬೇಕಾದ್ದು ಮುಖ್ಯ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ. ಮಲ್ಲಿಕಾರ್ಜುನ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಅಂಗವಿಕಲರ ಕಲ್ಯಾಣ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ ಸುಗಮ್ಯ ಯಾತ್ರೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಅಂಗವಿಕಲರಿಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸಲು ಸುಗಮ್ಯ ಯಾತ್ರೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಅವರಿಗೆ ಅನುಕೂಲ ಕಲ್ಪಿಸಲಾಗುವುದು’ ಎಂದರು.</p>.<p>ಅಂಗವಿಕಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಾಂಡು ಸುತಾರ ಮಾತನಾಡಿ, ‘ತಾಲ್ಲೂಕಿನಲ್ಲಿ ಸುಳ್ಳು ಪ್ರಮಾಣಪತ್ರದ ಹಾವಳಿ ಮೀತಿ ಮೀರಿದ್ದು, ನೂನತೆ ಇಲ್ಲದವರೂ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯ ಪಡೆಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿದರು.</p>.<p>‘ಅಂಗವಿಕಲರಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಕಾರಣಕ್ಕೆ ದುರ್ಬಳಕೆ ಮಾಡುತ್ತಿರುವ ಪ್ರಕರಣಗಳೂ ಹೆಚ್ಚುತ್ತಿವೆ. ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಫ್. ಹುಳ್ಯಾಳ, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಪ್ರಕಾಶ ಹಿರೇಮಠ, ನಾಗರಾಜ ಅಗಸನಹಳ್ಳಿ, ಶಾಂತಾ ಪಟ್ಟಣಶೆಟ್ಟಿ, ಚಂದ್ರಶೇಖರ ಮಳಿಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>