<p><strong>ಹಾವೇರಿ</strong>: ರಾಜ್ಯ ಸರ್ಕಾರ ನಡೆಸಿದ ಕುಲಶಾಸ್ತ್ರೀಯ ವರದಿಯನ್ನು ಯಥಾವತ್ತಾಗಿ ಜಾರಿಗೆ ತಂದು, ಜೋಗಿ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಹಾವೇರಿ ಜಿಲ್ಲೆ ಜೋಗಿ ಸಮಾಜದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಈಚೆಗೆ ಮನವಿ ಸಲ್ಲಿಸಲಾಯಿತು. </p>.<p>ಜೋಗಿ ಸಮುದಾಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಹಿಂದುಳಿದಿದೆ. ಈ ಸಮಾಜದ ಅಕ್ಷರತೆ ಶೇ 0.01 ಇದ್ದು, ಭಿಕ್ಷಾಟನೆ, ಬೀಗದ ಕೀ, ಛತ್ರಿ ದುರಸ್ತಿ ಹಾಗೂ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇಲ್ಲಿಯವರೆಗೆ ಶೇ 90ರಷ್ಟು ಸಮಾಜದವರಿಗೆ ನಿವೇಶನವಾಗಲಿ, ಮನೆಯಾಗಲಿ ಸಿಕ್ಕಿಲ್ಲ. ಉಳುಮೆ ಮಾಡಲು ಜಮೀನು ದೊರೆತಿಲ್ಲ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.</p>.<p>ಸಮುದಾಯದ ಬಗ್ಗೆ 12 ವರ್ಷಗಳ ಹಿಂದೆ ಕುಲಶಾಸ್ತ್ರೀಯ ಅಧ್ಯಯನ ಮಾಡಿಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಆದರೆ ಈ ತನಕ ಸಮಾಜಕ್ಕೆ ನ್ಯಾಯ ಸಿಕ್ಕಿಲ್ಲ ಎಂದು ಸಮುದಾಯದವರು ತಿಳಿಸಿದರು. </p>.<p>ಹಾವೇರಿ ಜಿಲ್ಲೆ ಜೋಗಿ ಸಮಾಜದ ಜಿಲ್ಲಾ ಘಟಕ ಅಧ್ಯಕ್ಷ ರಾಮು ಮಧುರಕರ, ಸಂತೋಷ ಎನ್. ಮಧುರಕರ, ಹೊಳಿಲಿಂಗಪ್ಪ ತಿಳವಳ್ಳಿ, ಬಸವರಾಜ ಪಾರ್ಶಿ, ವಿಠ್ಠಲ್ ಗೊರೆ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ರಾಜ್ಯ ಸರ್ಕಾರ ನಡೆಸಿದ ಕುಲಶಾಸ್ತ್ರೀಯ ವರದಿಯನ್ನು ಯಥಾವತ್ತಾಗಿ ಜಾರಿಗೆ ತಂದು, ಜೋಗಿ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಹಾವೇರಿ ಜಿಲ್ಲೆ ಜೋಗಿ ಸಮಾಜದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಈಚೆಗೆ ಮನವಿ ಸಲ್ಲಿಸಲಾಯಿತು. </p>.<p>ಜೋಗಿ ಸಮುದಾಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಹಿಂದುಳಿದಿದೆ. ಈ ಸಮಾಜದ ಅಕ್ಷರತೆ ಶೇ 0.01 ಇದ್ದು, ಭಿಕ್ಷಾಟನೆ, ಬೀಗದ ಕೀ, ಛತ್ರಿ ದುರಸ್ತಿ ಹಾಗೂ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇಲ್ಲಿಯವರೆಗೆ ಶೇ 90ರಷ್ಟು ಸಮಾಜದವರಿಗೆ ನಿವೇಶನವಾಗಲಿ, ಮನೆಯಾಗಲಿ ಸಿಕ್ಕಿಲ್ಲ. ಉಳುಮೆ ಮಾಡಲು ಜಮೀನು ದೊರೆತಿಲ್ಲ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.</p>.<p>ಸಮುದಾಯದ ಬಗ್ಗೆ 12 ವರ್ಷಗಳ ಹಿಂದೆ ಕುಲಶಾಸ್ತ್ರೀಯ ಅಧ್ಯಯನ ಮಾಡಿಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಆದರೆ ಈ ತನಕ ಸಮಾಜಕ್ಕೆ ನ್ಯಾಯ ಸಿಕ್ಕಿಲ್ಲ ಎಂದು ಸಮುದಾಯದವರು ತಿಳಿಸಿದರು. </p>.<p>ಹಾವೇರಿ ಜಿಲ್ಲೆ ಜೋಗಿ ಸಮಾಜದ ಜಿಲ್ಲಾ ಘಟಕ ಅಧ್ಯಕ್ಷ ರಾಮು ಮಧುರಕರ, ಸಂತೋಷ ಎನ್. ಮಧುರಕರ, ಹೊಳಿಲಿಂಗಪ್ಪ ತಿಳವಳ್ಳಿ, ಬಸವರಾಜ ಪಾರ್ಶಿ, ವಿಠ್ಠಲ್ ಗೊರೆ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>