ತರಿಕೇರಿಯ ಮಂಜು ಮಹಾರಾಜರು ಮಾತನಾಡಿ, ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿಯೇ ಧರ್ಮ ಗುರುಗಳ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಮೇಲ್ವರ್ಗದ ಸಮಾಜದವರು ಹಿಂದುಳಿದ ಸಮಾಜದವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಂಜಾರ ಸಮಾಜ ಒಗ್ಗಟ್ಟಾಗಿದ್ದು, ಇಂತಹ ಘಟನೆಯನ್ನು ಸಹಿಸುವುದಿಲ್ಲ. ಹಲ್ಲೆ ನಡೆಸಿದ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಸಮಾಜದ ಮುಖಂಡ ತಿಪ್ಪೇಸ್ವಾಮಿ ಇದ್ದರು.